ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ಎಂಪಿ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ ಇವತ್ತಿಗೂ ಹಾಗೇ ಇದೆ ಮತ್ತು ನೀವು ಕೊಟ್ಟಿರುವ ಈ ಶಕ್ತಿಯಿಂದಲೇ ಇವತ್ತಿಗೂ ಸೈದ್ಧಾಂತಿಕ ಕೆಲಸ ಮತ್ತು ಹೋರಾಟವನ್ನು 8 ಎಫ್ಐಆರ್ ಹಾಕಿಸಿಕೊಂಡರೂ ಮುಂದುವರಿಸುತ್ತಿದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದ ಹೀಗೇ ನಿರಂತರವಾಗಿರಲಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುತ್ತದೆ ಎಂದು ತೀವ್ರ ವಿಶ್ವಾಸದಲ್ಲಿದ್ದ ಪ್ರತಾಪ್ ಸಿಂಹ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಮಿಸ್ ಆಗಿತ್ತು. ಕೊನೆಗೆ ಬಿಜೆಪಿ ಹೈಕಮಾಂಡ್ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿತ್ತು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಲಕ್ಷ್ಮಣ್ ವಿರುದ್ಧ 1.30 ಲಕ್ಷ ಮತಗಳ ಅಂತರದಿಂದ ಯದುವೀರ್ ಒಡೆಯರ್ ಜಯಗಳಿಸಿದರು. ಪರಿಣಾಮ ಸಿಎಂ ಸಿದ್ದರಾಮಯ್ಯಗೆ ತವರು ಜಿಲ್ಲೆಯಲ್ಲೇ ಭಾರೀ ಮುಖಭಂಗವಾಗಿತ್ತು.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…