ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ ಅಗತ್ಯ ಎಂದು ಮೈಸೂರು ಮಹಾ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎಂ.ವೀಣಾ ಹೇಳಿದರು.
ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ನಿರಂತರ ಅಭ್ಯಾಸ, ಸತತ ಕಠಿಣ ಪರಿಶ್ರಮದಿಂದ ಮಾತ್ರ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ. ಓದುವಾಗ ಎಚ್ಚರಿಕೆಯಿಂದ, ವಿವೇಚನೆಯಿಂದ ಓದುವುದು ಉತ್ತಮ. ನಿತ್ಯ ದಿನಪತ್ರಿಕೆ ಓದಲು ಒತ್ತು ನೀಡಿ, ಸಾಮಾನ್ಯ ಜ್ಞಾನ ಅರಿವಿರಲಿ ಎಂದು ಕಿವಿಮಾತು ಹೇಳಿದರು.
ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಪರೀಕ್ಷೆಗಳಿಗೆ ಹೆಚ್ಚು ತಯಾರಿ ಮುಖ್ಯ. ಓದುವಾಗ ಯಾವಾಗಲೂ ವ್ಯಕ್ತಿಯೊಬ್ಬರನ್ನು ಮಾದರಿಯನ್ನಾಗಿಟ್ಟುಕೊಂಡಾಗ ಆಸಕ್ತಿ ಹೆಚ್ಚಾಗುತ್ತದೆ. ನಾವೆಲ್ಲಾ ಓದುವಾಗ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಹೆಚ್ಚಾಗಿ ಅನುಕರಿಸುತ್ತಿದ್ದೆವು ಎಂದು ತಮ್ಮ ಅನುಭವ ಹಂಚಿಕೊಂಡರು.
ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ಗೆಲುವು-ಸೋಲು ಸಾಮಾನ್ಯ. ಸೋತರೆ ಕುಗ್ಗದೇ ನಿರಂತರ ಪ್ರಯತ್ನ ಪಡಬೇಕು, ಆಗ ಗೆಲುವು ನಿಶ್ವಿತ ಎಂದು ಪ್ರತಿಪಾದಿಸಿದರು.
ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ ಎಂ.ಬಾಲಸುಬ್ರಹ್ಮಣ್ಯ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ದೂರದ ಪಯಣದಂತೆ, ಪರಿಶ್ರಮ ಮುಖ್ಯ. ನಿಮಗೆ ಅನುಕೂಲವಾಗುವಂತೆ ಅಭ್ಯಾಸ ಮತ್ತು ಸಂವಹನ ಕೌಶಲ್ಯ ಅಳವಡಿಸಿಕೊಳ್ಳಿ. ಎಷ್ಟು ಮತ್ತು ಹೇಗೆ ಓದುತ್ತೀರಾ ಎನ್ನುವುದು ಮುಖ್ಯ ಎಂದು ತಿಳಿಸಿದರು.
ಕರಾಮುವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ಧೈರ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು. ಸಮಾಜದಲ್ಲಿ ನ್ಯಾಯಯುತ ಬದುಕು ಕಟ್ಟಿಕೊಳ್ಳಬೇಕು. ಗುರಿ ಇಟ್ಟುಕೊಂಡು ತಯಾರಿ ನಡೆಸಬೇಕು. ಸಾಧನೆಗೆ ಸತತ ಪ್ರಯತ್ನವಿರಬೇಕು. ಅರಿವೇ ಗುರು ಎನ್ನುವ ಹಾಗೆ ನಿಮ್ಮನ್ನು ನೀವು ನಂಬಿ ಎಂದು ಸಲಹೆ ನೀಡಿದರು.
ಕರಾಮುವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಇನ್ನಿತರರು ಹಾಜರಿದ್ದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…