ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ ಅಗತ್ಯ ಎಂದು ಮೈಸೂರು ಮಹಾ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎಂ.ವೀಣಾ ಹೇಳಿದರು.
ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ನಿರಂತರ ಅಭ್ಯಾಸ, ಸತತ ಕಠಿಣ ಪರಿಶ್ರಮದಿಂದ ಮಾತ್ರ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ. ಓದುವಾಗ ಎಚ್ಚರಿಕೆಯಿಂದ, ವಿವೇಚನೆಯಿಂದ ಓದುವುದು ಉತ್ತಮ. ನಿತ್ಯ ದಿನಪತ್ರಿಕೆ ಓದಲು ಒತ್ತು ನೀಡಿ, ಸಾಮಾನ್ಯ ಜ್ಞಾನ ಅರಿವಿರಲಿ ಎಂದು ಕಿವಿಮಾತು ಹೇಳಿದರು.
ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಪರೀಕ್ಷೆಗಳಿಗೆ ಹೆಚ್ಚು ತಯಾರಿ ಮುಖ್ಯ. ಓದುವಾಗ ಯಾವಾಗಲೂ ವ್ಯಕ್ತಿಯೊಬ್ಬರನ್ನು ಮಾದರಿಯನ್ನಾಗಿಟ್ಟುಕೊಂಡಾಗ ಆಸಕ್ತಿ ಹೆಚ್ಚಾಗುತ್ತದೆ. ನಾವೆಲ್ಲಾ ಓದುವಾಗ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಹೆಚ್ಚಾಗಿ ಅನುಕರಿಸುತ್ತಿದ್ದೆವು ಎಂದು ತಮ್ಮ ಅನುಭವ ಹಂಚಿಕೊಂಡರು.
ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ಗೆಲುವು-ಸೋಲು ಸಾಮಾನ್ಯ. ಸೋತರೆ ಕುಗ್ಗದೇ ನಿರಂತರ ಪ್ರಯತ್ನ ಪಡಬೇಕು, ಆಗ ಗೆಲುವು ನಿಶ್ವಿತ ಎಂದು ಪ್ರತಿಪಾದಿಸಿದರು.
ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ ಎಂ.ಬಾಲಸುಬ್ರಹ್ಮಣ್ಯ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ದೂರದ ಪಯಣದಂತೆ, ಪರಿಶ್ರಮ ಮುಖ್ಯ. ನಿಮಗೆ ಅನುಕೂಲವಾಗುವಂತೆ ಅಭ್ಯಾಸ ಮತ್ತು ಸಂವಹನ ಕೌಶಲ್ಯ ಅಳವಡಿಸಿಕೊಳ್ಳಿ. ಎಷ್ಟು ಮತ್ತು ಹೇಗೆ ಓದುತ್ತೀರಾ ಎನ್ನುವುದು ಮುಖ್ಯ ಎಂದು ತಿಳಿಸಿದರು.
ಕರಾಮುವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ಧೈರ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು. ಸಮಾಜದಲ್ಲಿ ನ್ಯಾಯಯುತ ಬದುಕು ಕಟ್ಟಿಕೊಳ್ಳಬೇಕು. ಗುರಿ ಇಟ್ಟುಕೊಂಡು ತಯಾರಿ ನಡೆಸಬೇಕು. ಸಾಧನೆಗೆ ಸತತ ಪ್ರಯತ್ನವಿರಬೇಕು. ಅರಿವೇ ಗುರು ಎನ್ನುವ ಹಾಗೆ ನಿಮ್ಮನ್ನು ನೀವು ನಂಬಿ ಎಂದು ಸಲಹೆ ನೀಡಿದರು.
ಕರಾಮುವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಇನ್ನಿತರರು ಹಾಜರಿದ್ದರು.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…