ಮೈಸೂರು: ಭಯೋತ್ಪಾದನೆಯ ವಿರುದ್ಧ ಭಾರತದ ಯೋಧರು ‘ಆಪರೇಷನ್ ಸಿಂಧೂರ’ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ನಮ್ಮ ಹೆಮ್ಮೆಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಟೀಂ ಮೈಸೂರು ತಂಡದ ವತಿಯಿಂದ ‘ದೇಶಕ್ಕಾಗಿ ರ್ಯಾಲಿ’ ಎಂಬ ಶೀರ್ಷಿಕೆಯಡಿ ಬೈಕ್ ರ್ಯಾಲಿಯನ್ನು ನಡೆಸಲಾಯಿತು.
ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಜಮಾವಣೆಗೊಂಡ ನೂರಾರು ಮಂದಿ ಮೊದಲಿಗೆ ಅಕಾಲಿಕ ಮರಣಕ್ಕೆ ತುತ್ತಾದ ಪದ್ಮಶ್ರೀ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ಬೈಕ್ ರ್ಯಾಲಿಯನ್ನು ಆರಂಭಿಸಲಾಯಿತು. ನಗರದ ಗಾಂಧಿ ವೃತ್ತದಿಂದ ಆರಂಭವಾಗಿ ಸಯ್ಯಾಜಿರಾವ್ ರಸ್ತೆಯಲ್ಲಿ ಸಾಗಿ ಚಿಕ್ಕ ಗಡಿಯಾರದ ಮುಖಾಂತರ ದೇವರಾಜ ಅರಸು ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ ಮೂಲಕ ಶಾಂತಲಾ ಚಿತ್ರಮಂದಿರದ ಬಳಿ ಕೊನೆಗೂಳಿಸಲಾಯಿತು.
ಟೀಂ ಮೈಸೂರಿನ ಗೋಕುಲ್ ಗೋವರ್ಧನ್, ಯಶವಂತ್, ಕಿರಣ್ ಜೈರಾಮ್ ಗೌಡ, ಅನಿಲ್ ಜೈನ್, ಹರೀಶ್ ಬಾಬು, ಲಿಂಗರಾಜು, ರಾಮಪ್ರಸಾದ್, ಮುರುಳಿ, ನವೀನ್, ಶಿವಪ್ರಸಾದ್, ಮನೋಹರ್, ತ್ರಿಮೂರ್ತಿ, ಯತೀಶ್, ಬಾಲಕೃಷ್ಣ, ಹರೀಶ್ ಶೆಟ್ಟಿ, ಆನಂದ್, ಮಂಜುನಾಥ್, ಸುನಿಲ್, ಹೇಮಂತ್, ಮನೋಜ್, ಗಣೇಶ್, ಕೃಷ್ಣ, ಸೃಜನ್, ಸಂತೋಷ್, ಶೇಖರ್, ನವೀನ್, ತಿಲಕ್ ಹಾಗೂ ಮಹಿಳಾ ಸದಸ್ಯರಾದ ಸುಧಾ ಗೌರವ್ ಮುರುಳಿ, ಸಹನಾ, ಸುಕೃತ, ಹರ್ಷಿತ, ತನಿಷ್ಕ, ಕಲ್ಯಾಣಿ, ವರ್ಷಿಣಿ ಭಾಗವಹಿಸಿದ್ದರು.
ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು…
ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದಿರುವ ಗವಿಸಿದ್ದೇಶ್ವರ ಮಹಾ ರಥೋತ್ಸವ ನಾಳೆಯಿಂದ ಆರಂಭವಾಗಲಿದೆ. ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ…
ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು.…
ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು…
ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿಸುವುದು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ…