ಮೈಸೂರು: ಭಯೋತ್ಪಾದನೆಯ ವಿರುದ್ಧ ಭಾರತದ ಯೋಧರು ‘ಆಪರೇಷನ್ ಸಿಂಧೂರ’ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ನಮ್ಮ ಹೆಮ್ಮೆಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಟೀಂ ಮೈಸೂರು ತಂಡದ ವತಿಯಿಂದ ‘ದೇಶಕ್ಕಾಗಿ ರ್ಯಾಲಿ’ ಎಂಬ ಶೀರ್ಷಿಕೆಯಡಿ ಬೈಕ್ ರ್ಯಾಲಿಯನ್ನು ನಡೆಸಲಾಯಿತು.
ನಗರದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಜಮಾವಣೆಗೊಂಡ ನೂರಾರು ಮಂದಿ ಮೊದಲಿಗೆ ಅಕಾಲಿಕ ಮರಣಕ್ಕೆ ತುತ್ತಾದ ಪದ್ಮಶ್ರೀ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು.
ನಂತರ ಬೈಕ್ ರ್ಯಾಲಿಯನ್ನು ಆರಂಭಿಸಲಾಯಿತು. ನಗರದ ಗಾಂಧಿ ವೃತ್ತದಿಂದ ಆರಂಭವಾಗಿ ಸಯ್ಯಾಜಿರಾವ್ ರಸ್ತೆಯಲ್ಲಿ ಸಾಗಿ ಚಿಕ್ಕ ಗಡಿಯಾರದ ಮುಖಾಂತರ ದೇವರಾಜ ಅರಸು ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ ಮೂಲಕ ಶಾಂತಲಾ ಚಿತ್ರಮಂದಿರದ ಬಳಿ ಕೊನೆಗೂಳಿಸಲಾಯಿತು.
ಟೀಂ ಮೈಸೂರಿನ ಗೋಕುಲ್ ಗೋವರ್ಧನ್, ಯಶವಂತ್, ಕಿರಣ್ ಜೈರಾಮ್ ಗೌಡ, ಅನಿಲ್ ಜೈನ್, ಹರೀಶ್ ಬಾಬು, ಲಿಂಗರಾಜು, ರಾಮಪ್ರಸಾದ್, ಮುರುಳಿ, ನವೀನ್, ಶಿವಪ್ರಸಾದ್, ಮನೋಹರ್, ತ್ರಿಮೂರ್ತಿ, ಯತೀಶ್, ಬಾಲಕೃಷ್ಣ, ಹರೀಶ್ ಶೆಟ್ಟಿ, ಆನಂದ್, ಮಂಜುನಾಥ್, ಸುನಿಲ್, ಹೇಮಂತ್, ಮನೋಜ್, ಗಣೇಶ್, ಕೃಷ್ಣ, ಸೃಜನ್, ಸಂತೋಷ್, ಶೇಖರ್, ನವೀನ್, ತಿಲಕ್ ಹಾಗೂ ಮಹಿಳಾ ಸದಸ್ಯರಾದ ಸುಧಾ ಗೌರವ್ ಮುರುಳಿ, ಸಹನಾ, ಸುಕೃತ, ಹರ್ಷಿತ, ತನಿಷ್ಕ, ಕಲ್ಯಾಣಿ, ವರ್ಷಿಣಿ ಭಾಗವಹಿಸಿದ್ದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…