ಮೈಸೂರು ನಗರ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಖಂಡಿಸಿ ಚಾಮುಂಡಿಬೆಟ್ಟ ಚಲೋ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಕೇಶವ್ ಮೂರ್ತಿ ಅವರು, ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಕರಾಗೋದು ಬೇಡ ಎಂದು ಮನವಿ ಮಾಡಿದ್ದೆವು. ಹೀಗಿದ್ದರೂ ಬಂಡತನದ ಸರ್ಕಾರ ಅವರಿಗೆ ಆಹ್ವಾನ ನೀಡಿದೆ. ನಮ್ಮ ಸಂಸ್ಕೃತಿ ಒಪ್ಪಿ ದಸರಾ ಉದ್ಘಾಟನೆ ಮಾಡಿದ್ರೆ ನಮ್ಮ ಅಭ್ಯಂತರ ಇಲ್ಲ. ಈಗಂತ ದಸರಾ ಉದ್ಘಾಟನೆಗೆ ನಾವು ಅಡ್ಡಿಪಡಿಸಲ್ಲ.

ಇದನ್ನು ಓದಿ: ಭಾನು ಮುಷ್ತಾಕ್ ಹಿಂದೂ ವಿರೋಧಿ : ನಿಖಿಲ್‌ ಕುಮಾರಸ್ವಾಮಿ

ಹಿಂದೂಗಳನ್ನ ಜಾಗೃತಿ ಮಾಡುವ ಕೆಲಸ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.8ರಂದು ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಕುರುಬಾರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತೇವೆ. ಬಳಿಕ ಚಾಮುಂಡಿ ಬೆಟ್ಟದಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತದೆ. ಹಿಂದೂಗಳು ಹಾಗೂ ಹಿಂದೂಗಳ ದೇವಾಲಯಗಳನ್ನು ಟಾರ್ಗೆಟ್ ಮಾಡಲಾಗ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

10 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

10 hours ago