ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ ಕೆರೆ ಬಳಿ ಪ್ರತಿಭಟನೆ ನಡೆಸಲಾಯಿತು.
ಕೆರೆ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಬಾರದು. ಇಲ್ಲಿನ ಪರಿಸರ ರಕ್ಷಿಸಬೇಕು. ಇಲ್ಲವಾದರೆ ಪರಿಸರವಾದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಪ್ರದೇಶದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಉದ್ಯಾನದ 2.20 ಎಕರೆ ಪ್ರದೇಶವನ್ನು ವಾಣಿಜ್ಯ ವಲಯಕ್ಕೆ ಬದಲಾಯಿಸಿಕೊಂಡಿದೆ. ನಿತ್ಯ ಮುಂಜನೆ ಹಾಗೂ ಸಂಜೆಯ ವೇಳೆ ಈ ಪ್ರದೇಶವನ್ನು ವಾಯುವಿಹಾರಿಗಳು ತಮ್ಮ ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಮಾಡುವುದು ಹಾಗೂ ಚಿಕ್ಕ ಮಕ್ಕಳಿಗೆ ಆಟವಾಡಲು ಬಳಸಿಕೊಳ್ಳುತ್ತಿದ್ದಾರೆ. ಇಲ್ಲಿನ ಕೆರೆ ದೇಶ-ವಿದೇಶಗಳ ಅಪರೂಪದ ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ. ಇಂತಹ ಪ್ರದೇಶದಲ್ಲಿ ವಾಣಿಜ್ಯ ಮತ್ತು ಬಹುಮಹಡಿ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಹೋರಾಟಗಾರರಾದ ಭಾನುಮೋಹನ್, ಅರವಿಂದ್ ಶರ್ಮ, ಕೆರೆ ಜಯರಾಮಯ್ಯ, ಸೋಸಲೆ ಸಿದ್ದರಾಜು, ಗಂಟಯ್ಯ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…