ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲಲಿ ಇದೇ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದೇನೆ.
ಇದನ್ನು ಓದಿ: ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಮೈಸೂರು ಕಸಬಾ ಹೋಬಳಿಯ ಸರ್ವೆ ನಂ.1ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದಕ್ಕೆ ನನ್ನ ವಿರೋಧವಿಲ್ಲ. ಬಹಿರಂಗ ಹಾಗೂ ಅಂತರಂಗ ಜಗಳ ವಿಚಾರವೂ ಇಲ್ಲಿ ಇಲ್ಲ. ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಅದರ ಬದಲು ಈ ನಿರ್ದಿಷ್ಟ ಖಾಸಗಿ ವ್ಯಕ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ.
ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ, ನಂತರದ ಒಪ್ಪಂದದ ದಿನಾಂಕವಾದ ಜನವರಿ.23, 1950 ರಂದು ಇತ್ಯರ್ಥವಾಗಿದೆ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿದ್ದು, ಆ ಕೆಲಸವನ್ನು ನಾನು ಮಾಡಿದ್ದೇನೆ.
ನಾನು ಸಲ್ಲಿಸಿದ ಅರ್ಜಿಯಲ್ಲಿ ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…