ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲಲಿ ಇದೇ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದೇನೆ.
ಇದನ್ನು ಓದಿ: ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಮೈಸೂರು ಕಸಬಾ ಹೋಬಳಿಯ ಸರ್ವೆ ನಂ.1ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದಕ್ಕೆ ನನ್ನ ವಿರೋಧವಿಲ್ಲ. ಬಹಿರಂಗ ಹಾಗೂ ಅಂತರಂಗ ಜಗಳ ವಿಚಾರವೂ ಇಲ್ಲಿ ಇಲ್ಲ. ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಅದರ ಬದಲು ಈ ನಿರ್ದಿಷ್ಟ ಖಾಸಗಿ ವ್ಯಕ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ.
ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ, ನಂತರದ ಒಪ್ಪಂದದ ದಿನಾಂಕವಾದ ಜನವರಿ.23, 1950 ರಂದು ಇತ್ಯರ್ಥವಾಗಿದೆ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿದ್ದು, ಆ ಕೆಲಸವನ್ನು ನಾನು ಮಾಡಿದ್ದೇನೆ.
ನಾನು ಸಲ್ಲಿಸಿದ ಅರ್ಜಿಯಲ್ಲಿ ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…