ಮೈಸೂರು ನಗರ

ಕರ್ನಾಟಕದಲ್ಲಿ ಮಾಲೀಕರಾಗುತ್ತಿರುವ ಅನ್ಯರಾಜ್ಯದವರು: ಡಾ.ಸಿ.ಎನ್‌ ವೆಂಕಟರಾಜು ವಿಷಾದ

ಮೈಸೂರು: ನಮ್ಮ ಕರ್ನಾಟಕದಲ್ಲಿ ಅನ್ಯರಾಜ್ಯದ ಮಾರ್ವಾಡಿಗಳೇ ಮಾಲೀಕರಾಗಿ ನೆಲೆಗೊಳ್ಳುತ್ತಿದ್ದಾರೆ. ನಮ್ಮವರು ಕೂಲಿಗಳಾಗುತ್ತಿದ್ದಾರೆ ಎಂದು ಮೈಸೂರು ವಲಯದ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾಧೀನಾಧಿಕಾರಿ ಡಾ.ಎನ್.ಸಿ.ವೆಂಕಟರಾಜು  ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ  ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಕರ್ನಾಟಕ ಸವಿನೆನಪಿನಲ್ಲಿ ‘ ಕನ್ನಡ- ಕರ್ನಾಟಕ- ಕನ್ನಡಿಗ’ ಎಂಬ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದದಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರದಲ್ಲಿ‌ ಪ್ರಸಿದ್ದವಾದ ಕರ್ನಾಟಕ ಎಂಬ ಸ್ಥಳ ಇದೆ. ಊಟಿ, ಕಾಸರಗೋಡು ನಮ್ಮವೇ. ಜೊತೆಗೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಸಂಬಂಧಿತ ಶಾಸನಗಳು ಬಗೆದಷ್ಟು ದೊರಕುತ್ತಿವೆ.  ಮಹಾಜನ್ ವರದಿಯಲ್ಲಿ 264 ಗ್ರಾಮಗಳು ಕರ್ನಾಟಕ ರಾಜ್ಯಕ್ಕೆ ಸೇರಬೇಕೆಂದು ದಾಖಲಾಗಿದೆ. ಆದರೆ ಇನ್ನೂ ಗಡಿ ವಿವಾದ ನಿಂತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಅನ್ಯ ರಾಜ್ಯದ ಗುಜರಾತಿಗಳು, ಮಾರ್ವಾಡಿಗಳು, ಬಿಹಾರಿಗಳು ನಮ್ಮ ರಾಜ್ಯದಲ್ಲಿ ನೆಲೆಗೊಳ್ಳುತ್ತಿದ್ದೂ, ನಾವು ಅವರ ಭಾಷೆಗಳನ್ನು ಕಲಿತು ನಾವು ಅವರ ಜೊತೆ ವ್ಯವಹಾರ ನಡೆಸುವ ದುಸ್ಥಿತಿ ಬಂದಿದೆ. ಇನ್ನು ನಮ್ಮ ನೆಲೆ, ಭಾಷೆ ಎಲ್ಲಿ ಉಳಿಯಿತು?ಅನ್ಯ ರಾಜ್ಯದವರು ನಮ್ಮಲ್ಲಿ‌ ಬಂದು ಉದ್ದಿಮೆದಾರರಾಗುತ್ತಿದ್ದಾರೆ. ಕನ್ನಡಿಗರು ಹೆಚ್ಚೆಚ್ಚು ಉದ್ದಿಮೆದಾರರಾಗುವ ಕಡೆಗೆ ಮನಸ್ಸು ಮಾಡಬೇಕು. ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಕನಿಷ್ಠ ಶೇಕಡವಾರು ಬಡ್ಡಿಯಲ್ಲಿ ಹೆಚ್ಚು ಹಣವನ್ನು ಸಾಲವಾಗಿ ಉದ್ದಿಮೆ ಸ್ಥಾಪಿಸಲು ಅವಕಾಶ ಮಾಡಿಕೊಡುತ್ತಿದ್ದೆ. ಯಾರು ಮುಂದೆ ಬರುತ್ತಿಲ್ಲ. ಇಂತಹ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು‌.

ವೇದಿಕೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಎನ್.ಕೆ.ಲೋಲಾಕ್ಷಿ  ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಎಸ್.ಡಿ.ಶಶಿಕಲಾ, ಚಿಂತಕ ಸಿ.ನಾಗಣ್ಣ, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಕೆ.ಸಿ.ಶಿವಾರೆಡ್ಡಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

15 mins ago

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…

53 mins ago

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…

1 hour ago

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

2 hours ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

2 hours ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

2 hours ago