ಮೈಸೂರು ನಗರ

ಕರ್ನಾಟಕದಲ್ಲಿ ಮಾಲೀಕರಾಗುತ್ತಿರುವ ಅನ್ಯರಾಜ್ಯದವರು: ಡಾ.ಸಿ.ಎನ್‌ ವೆಂಕಟರಾಜು ವಿಷಾದ

ಮೈಸೂರು: ನಮ್ಮ ಕರ್ನಾಟಕದಲ್ಲಿ ಅನ್ಯರಾಜ್ಯದ ಮಾರ್ವಾಡಿಗಳೇ ಮಾಲೀಕರಾಗಿ ನೆಲೆಗೊಳ್ಳುತ್ತಿದ್ದಾರೆ. ನಮ್ಮವರು ಕೂಲಿಗಳಾಗುತ್ತಿದ್ದಾರೆ ಎಂದು ಮೈಸೂರು ವಲಯದ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾಧೀನಾಧಿಕಾರಿ ಡಾ.ಎನ್.ಸಿ.ವೆಂಕಟರಾಜು  ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ  ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಕರ್ನಾಟಕ ಸವಿನೆನಪಿನಲ್ಲಿ ‘ ಕನ್ನಡ- ಕರ್ನಾಟಕ- ಕನ್ನಡಿಗ’ ಎಂಬ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದದಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರದಲ್ಲಿ‌ ಪ್ರಸಿದ್ದವಾದ ಕರ್ನಾಟಕ ಎಂಬ ಸ್ಥಳ ಇದೆ. ಊಟಿ, ಕಾಸರಗೋಡು ನಮ್ಮವೇ. ಜೊತೆಗೆ ಮಹಾರಾಷ್ಟ್ರದಲ್ಲಿ ಕರ್ನಾಟಕ ಸಂಬಂಧಿತ ಶಾಸನಗಳು ಬಗೆದಷ್ಟು ದೊರಕುತ್ತಿವೆ.  ಮಹಾಜನ್ ವರದಿಯಲ್ಲಿ 264 ಗ್ರಾಮಗಳು ಕರ್ನಾಟಕ ರಾಜ್ಯಕ್ಕೆ ಸೇರಬೇಕೆಂದು ದಾಖಲಾಗಿದೆ. ಆದರೆ ಇನ್ನೂ ಗಡಿ ವಿವಾದ ನಿಂತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಅನ್ಯ ರಾಜ್ಯದ ಗುಜರಾತಿಗಳು, ಮಾರ್ವಾಡಿಗಳು, ಬಿಹಾರಿಗಳು ನಮ್ಮ ರಾಜ್ಯದಲ್ಲಿ ನೆಲೆಗೊಳ್ಳುತ್ತಿದ್ದೂ, ನಾವು ಅವರ ಭಾಷೆಗಳನ್ನು ಕಲಿತು ನಾವು ಅವರ ಜೊತೆ ವ್ಯವಹಾರ ನಡೆಸುವ ದುಸ್ಥಿತಿ ಬಂದಿದೆ. ಇನ್ನು ನಮ್ಮ ನೆಲೆ, ಭಾಷೆ ಎಲ್ಲಿ ಉಳಿಯಿತು?ಅನ್ಯ ರಾಜ್ಯದವರು ನಮ್ಮಲ್ಲಿ‌ ಬಂದು ಉದ್ದಿಮೆದಾರರಾಗುತ್ತಿದ್ದಾರೆ. ಕನ್ನಡಿಗರು ಹೆಚ್ಚೆಚ್ಚು ಉದ್ದಿಮೆದಾರರಾಗುವ ಕಡೆಗೆ ಮನಸ್ಸು ಮಾಡಬೇಕು. ಸರ್ಕಾರ ಎಸ್ಸಿ ಎಸ್ಟಿ ಸಮುದಾಯಕ್ಕೆ ಕನಿಷ್ಠ ಶೇಕಡವಾರು ಬಡ್ಡಿಯಲ್ಲಿ ಹೆಚ್ಚು ಹಣವನ್ನು ಸಾಲವಾಗಿ ಉದ್ದಿಮೆ ಸ್ಥಾಪಿಸಲು ಅವಕಾಶ ಮಾಡಿಕೊಡುತ್ತಿದ್ದೆ. ಯಾರು ಮುಂದೆ ಬರುತ್ತಿಲ್ಲ. ಇಂತಹ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು‌.

ವೇದಿಕೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಎನ್.ಕೆ.ಲೋಲಾಕ್ಷಿ  ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಎಸ್.ಡಿ.ಶಶಿಕಲಾ, ಚಿಂತಕ ಸಿ.ನಾಗಣ್ಣ, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಕೆ.ಸಿ.ಶಿವಾರೆಡ್ಡಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago