ಮೈಸೂರು ನಗರ

ಔಟ್‌ಲುಕ್‌ ಐಕೇರ್‌ ರ‍್ಯಾಂಕಿಂಗ್ಸ್‌ : ಮೈಸೂರು ವಿಶ್ವವಿದ್ಯಾನಿಲಯಕ್ಕೆ 8ನೇ ಸ್ಥಾನ

ಮೈಸೂರು : ಔಟ್‌ಲುಕ್ ಐಕೇರ್ ರ‍್ಯಾಂಕಿಂಗ್ಸ್-2025ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 8ನೇ ಸ್ಥಾನ ಪಡೆದಿದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದ್ದಾರೆ.

ಔಟ್‌ಲುಕ್ ನಿಯತ ಕಾಲಿಕೆಯು ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆ, ಉದ್ದಿಮೆ ಸಹಯೋಗ ಮತ್ತು ಉದ್ಯೋಗಾವಕಾಶ, ಮೂಲಭೂತ ಸೌಕರ್ಯ ಮತ್ತು ಸವಲತ್ತು, ಆಡಳಿತ ಮತ್ತು ವಿಸ್ತರಣಾ ಚಟುವಟಿಕೆ ಹಾಗೂ ವೈವಿಧ್ಯತೆ ಮತ್ತು ವ್ಯಾಪ್ತಿ ಈ ಐದು ಪ್ರಧಾನ ಅಂಶಗಳನ್ನು ಆಧರಿಸಿ ರ‍್ಯಾಂಕಿಂಗ್ ನೀಡುತ್ತದೆ. ದೇಶದ 75 ಅತ್ಯುತ್ತಮ ರಾಜ್ಯ ಸಾರ್ವಜನಿಕ ವಿಶ್ವವಿದ್ಯಾನಿಲಯಗಳ ಪೈಕಿ ಮೈಸೂರು ವಿವಿಗೆ ಈ 8ನೇ ರ‍್ಯಾಂಕಿಂಗ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಖಾಯಂ ಅಧ್ಯಾಪಕರುಗಳ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ಮೈಸೂರು ವಿವಿಯು 8ನೇ ಸ್ಥಾನ ಪಡೆದಿರುವುದು ಅಭಿಮಾನದ ಸಂಗತಿಯಾಗಿದೆ. ಇಡೀ ವಿಶ್ವವಿದ್ಯಾನಿಲಯದ ದತ್ತಾಂಶ ಮತ್ತು ದಾಖಲೆಗಳನ್ನು ನಿಖರವಾಗಿ ಹಾಗೂ ಸಮರ್ಪಕವಾಗಿ ಬಿಂಬಿಸಿದ ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಖಾತರಿ ಘಟಕದ (ಐ.ಕ್ಯು.ಎ.ಸಿ) ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಪರಿಶ್ರಮ ಬಹು ಶ್ಲಾಘನೀಯವಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಈ ಯಶಸ್ಸಿಗೆ ಕಾರಣಕರ್ತರಾದ ಸಿಂಡಿಕೇಟ್ ಹಾಗೂ ಶೈಕ್ಷಣಿಕ ಮಂಡಳಿಯ ಸದಸ್ಯರು, ಅಧ್ಯಾಪಕರು, ಸಂಶೋಧಕರು, ವಿದ್ಯಾರ್ಥಿಗಳು, ಅಧಿಕಾರಿಗಳು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ಪೋಷಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಕುಲಪತಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

2 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

2 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

2 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

2 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

2 hours ago