ಮೈಸೂರು ನಗರ

ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳ ನಿಯೋಜನೆ

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಆಷಾಡ ಶುಕ್ರವಾರದ ಪ್ರಯುಕ್ತ ನಾಳೆ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರ ಹರಿದು ಬರಲಿದ್ದು, ಅಲ್ಲಿ ತೆರಳುವ ಎಲ್ಲಾ ಭಕ್ತರಿಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ನಗರ ಸಾರಿಗೆಯಿಂದ ಸುಮಾರು 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 100ರಷ್ಟು ಕೆಎಸ್ಆರ್‌ಟಿಸಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಸಾಮಾನ್ಯ, 300 ರೂ ಟಿಕೆಟ್ ಮತ್ತು 2000 ರೂ ವಿಶೇಷ ದರ್ಶನದ ಟಿಕೆಟ್ ಎಂದು ಭಕ್ತರಿಗೆ ಮೂರು ವಿಭಾಗ ಮಾಡಿ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಎಲಿಪ್ಯಾಡ್‌ ಬಳಿಯಿರುವ ಮೈದಾನದಲ್ಲಿ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. 2000ರೂ ಟಿಕೆಟ್ ಪಡೆದ ಭಕ್ತರನ್ನು ಕರೆದೊಯ್ಯಲು ಮಲ್ಟಿಪಲ್ ಆಕ್ಸಲ್ ಹವಾನಿಯಂತ್ರಿತ ಎಂಟು ಹೈಟೆಕ್ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಅದರ ಜೊತೆಗೆ ಸುಮಾರು 50ಕ್ಕೂ ಹೆಚ್ಚು ಸಾಮಾನ್ಯ ಬಸ್‌ಗಳು ಸಂಚರಿಸಲಿವೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ನಿರ್ವಾಹಕರನ್ನೇ ಗುರುತಿಸಿ ನಿಯೋಜನೆ ಮಾಡಲಾಗಿದೆ. ಶಕ್ತಿ ಯೋಜನೆ ಅನ್ವಯವಾಗುವಂತೆ ಎಲ್ಲಾ ಮಹಿಳೆಯರಿಗೆ ಉಚಿತವಿರುತ್ತದೆ. ಆದರೆ ಆಷಾಡ ಶುಕ್ರವಾರ ಮಾತ್ರ ಪುರುಷ ಪ್ರಯಾಣಿಕರಿಗೆ ಉಚಿತ ಪ್ರಯಾಣ ಇರಲಿದ್ದು, ಉಳಿದ ದಿನ ಟಿಕೆಟ್ ಪಡೆದು ಹೋಗಬೇಕಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago