Over 60 Buses Deployed to Chamundi Hill for Ashada Friday
ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆಷಾಡ ಶುಕ್ರವಾರದ ಪ್ರಯುಕ್ತ ನಾಳೆ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರ ಹರಿದು ಬರಲಿದ್ದು, ಅಲ್ಲಿ ತೆರಳುವ ಎಲ್ಲಾ ಭಕ್ತರಿಗೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ನಗರ ಸಾರಿಗೆಯಿಂದ ಸುಮಾರು 60ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 100ರಷ್ಟು ಕೆಎಸ್ಆರ್ಟಿಸಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಸಾಮಾನ್ಯ, 300 ರೂ ಟಿಕೆಟ್ ಮತ್ತು 2000 ರೂ ವಿಶೇಷ ದರ್ಶನದ ಟಿಕೆಟ್ ಎಂದು ಭಕ್ತರಿಗೆ ಮೂರು ವಿಭಾಗ ಮಾಡಿ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಎಲಿಪ್ಯಾಡ್ ಬಳಿಯಿರುವ ಮೈದಾನದಲ್ಲಿ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. 2000ರೂ ಟಿಕೆಟ್ ಪಡೆದ ಭಕ್ತರನ್ನು ಕರೆದೊಯ್ಯಲು ಮಲ್ಟಿಪಲ್ ಆಕ್ಸಲ್ ಹವಾನಿಯಂತ್ರಿತ ಎಂಟು ಹೈಟೆಕ್ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಅದರ ಜೊತೆಗೆ ಸುಮಾರು 50ಕ್ಕೂ ಹೆಚ್ಚು ಸಾಮಾನ್ಯ ಬಸ್ಗಳು ಸಂಚರಿಸಲಿವೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ನಿರ್ವಾಹಕರನ್ನೇ ಗುರುತಿಸಿ ನಿಯೋಜನೆ ಮಾಡಲಾಗಿದೆ. ಶಕ್ತಿ ಯೋಜನೆ ಅನ್ವಯವಾಗುವಂತೆ ಎಲ್ಲಾ ಮಹಿಳೆಯರಿಗೆ ಉಚಿತವಿರುತ್ತದೆ. ಆದರೆ ಆಷಾಡ ಶುಕ್ರವಾರ ಮಾತ್ರ ಪುರುಷ ಪ್ರಯಾಣಿಕರಿಗೆ ಉಚಿತ ಪ್ರಯಾಣ ಇರಲಿದ್ದು, ಉಳಿದ ದಿನ ಟಿಕೆಟ್ ಪಡೆದು ಹೋಗಬೇಕಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…