ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ.
ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ ವಿದ್ಯಾಭವನದ ಮೈಸೂರು ಕಲಾ ತಂಡದಿಂದ ನೃತ್ಯ ಪ್ರದರ್ಶನ ಹಾಗೂ ನಾಟಕ ಪ್ರದರ್ಶಿಸಲಾಯಿತು. ನೃತ್ಯ ನಾಟಕಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸಂಜೆ 5.45 ರಿಂದ 6.30ರವರೆಗೆ ಋತ್ವಿಕ್ ಸಿ.ರಾಜ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಜಾನಪದ ಗೀತೆ, ಭಕ್ತಿಗೀತೆ, ಜನಪ್ರಿಯ ಚಲನಚಿತ್ರಗೀತೆಗಳ ಗಾಯನದಿಂದ ನೆರೆದಿದ್ದವರನ್ನು ಸಂಗೀತ ಕಾರ್ಯಕ್ರಮ ತಲೆದೂಗುವಂತೆ ಮಾಡಿತು.
ಸಂಜೆ 6.45 ರಿಂದ 8 ಗಂಟೆವರೆಗೆ ಮನೋ ಮ್ಯೂಸಿಕ್ ಲೈನ್ಸ್ ಮತ್ತು ತಂಡದಿಂದ ಕವಿ, ಕಾವ್ಯ, ಸಂಗೀತ ಸಂಗಮ ಪ್ರಸ್ತುತಿಪಡಿಸಿದರು. ಭಾವಗೀತೆಗಳು, ಸುಮಧುರ ಗೀತೆಗಳ ಗಾಯನ ಕೇಳುಗರನ್ನು ಇಂಪಾಗಿಸಿತು. ರಾತ್ರಿ 8.15 ರಿಂದ 9.30 ರವರೆಗೆ ಎಚ್.ಎಲ್.ಶಿವಶಂಕರ್ ಸ್ವಾಮಿ ಮತ್ತು ತಂಡದವರಿಂದ ರಾಗ ರಿದಂ ಫ್ಯೂಷನ್ನ ಸಂಗೀತಕ್ಕೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…