ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ.
ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ ವಿದ್ಯಾಭವನದ ಮೈಸೂರು ಕಲಾ ತಂಡದಿಂದ ನೃತ್ಯ ಪ್ರದರ್ಶನ ಹಾಗೂ ನಾಟಕ ಪ್ರದರ್ಶಿಸಲಾಯಿತು. ನೃತ್ಯ ನಾಟಕಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸಂಜೆ 5.45 ರಿಂದ 6.30ರವರೆಗೆ ಋತ್ವಿಕ್ ಸಿ.ರಾಜ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಜಾನಪದ ಗೀತೆ, ಭಕ್ತಿಗೀತೆ, ಜನಪ್ರಿಯ ಚಲನಚಿತ್ರಗೀತೆಗಳ ಗಾಯನದಿಂದ ನೆರೆದಿದ್ದವರನ್ನು ಸಂಗೀತ ಕಾರ್ಯಕ್ರಮ ತಲೆದೂಗುವಂತೆ ಮಾಡಿತು.
ಸಂಜೆ 6.45 ರಿಂದ 8 ಗಂಟೆವರೆಗೆ ಮನೋ ಮ್ಯೂಸಿಕ್ ಲೈನ್ಸ್ ಮತ್ತು ತಂಡದಿಂದ ಕವಿ, ಕಾವ್ಯ, ಸಂಗೀತ ಸಂಗಮ ಪ್ರಸ್ತುತಿಪಡಿಸಿದರು. ಭಾವಗೀತೆಗಳು, ಸುಮಧುರ ಗೀತೆಗಳ ಗಾಯನ ಕೇಳುಗರನ್ನು ಇಂಪಾಗಿಸಿತು. ರಾತ್ರಿ 8.15 ರಿಂದ 9.30 ರವರೆಗೆ ಎಚ್.ಎಲ್.ಶಿವಶಂಕರ್ ಸ್ವಾಮಿ ಮತ್ತು ತಂಡದವರಿಂದ ರಾಗ ರಿದಂ ಫ್ಯೂಷನ್ನ ಸಂಗೀತಕ್ಕೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…