ಮೈಸೂರು ನಗರ

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ.

ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ ವಿದ್ಯಾಭವನದ ಮೈಸೂರು ಕಲಾ ತಂಡದಿಂದ ನೃತ್ಯ ಪ್ರದರ್ಶನ ಹಾಗೂ ನಾಟಕ ಪ್ರದರ್ಶಿಸಲಾಯಿತು. ನೃತ್ಯ ನಾಟಕಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸಂಜೆ 5.45 ರಿಂದ 6.30ರವರೆಗೆ ಋತ್ವಿಕ್ ಸಿ.ರಾಜ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಜಾನಪದ ಗೀತೆ, ಭಕ್ತಿಗೀತೆ, ಜನಪ್ರಿಯ ಚಲನಚಿತ್ರಗೀತೆಗಳ ಗಾಯನದಿಂದ ನೆರೆದಿದ್ದವರನ್ನು ಸಂಗೀತ ಕಾರ್ಯಕ್ರಮ ತಲೆದೂಗುವಂತೆ ಮಾಡಿತು.

ಸಂಜೆ 6.45 ರಿಂದ 8 ಗಂಟೆವರೆಗೆ ಮನೋ ಮ್ಯೂಸಿಕ್ ಲೈನ್ಸ್ ಮತ್ತು ತಂಡದಿಂದ ಕವಿ, ಕಾವ್ಯ, ಸಂಗೀತ ಸಂಗಮ ಪ್ರಸ್ತುತಿಪಡಿಸಿದರು. ಭಾವಗೀತೆಗಳು, ಸುಮಧುರ ಗೀತೆಗಳ ಗಾಯನ ಕೇಳುಗರನ್ನು ಇಂಪಾಗಿಸಿತು. ರಾತ್ರಿ 8.15 ರಿಂದ 9.30 ರವರೆಗೆ ಎಚ್.ಎಲ್.ಶಿವಶಂಕರ್ ಸ್ವಾಮಿ ಮತ್ತು ತಂಡದವರಿಂದ ರಾಗ ರಿದಂ ಫ್ಯೂಷನ್‌ನ ಸಂಗೀತಕ್ಕೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

1 hour ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

1 hour ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

3 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

3 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

3 hours ago