ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ.
ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ ವಿದ್ಯಾಭವನದ ಮೈಸೂರು ಕಲಾ ತಂಡದಿಂದ ನೃತ್ಯ ಪ್ರದರ್ಶನ ಹಾಗೂ ನಾಟಕ ಪ್ರದರ್ಶಿಸಲಾಯಿತು. ನೃತ್ಯ ನಾಟಕಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸಂಜೆ 5.45 ರಿಂದ 6.30ರವರೆಗೆ ಋತ್ವಿಕ್ ಸಿ.ರಾಜ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಜಾನಪದ ಗೀತೆ, ಭಕ್ತಿಗೀತೆ, ಜನಪ್ರಿಯ ಚಲನಚಿತ್ರಗೀತೆಗಳ ಗಾಯನದಿಂದ ನೆರೆದಿದ್ದವರನ್ನು ಸಂಗೀತ ಕಾರ್ಯಕ್ರಮ ತಲೆದೂಗುವಂತೆ ಮಾಡಿತು.
ಸಂಜೆ 6.45 ರಿಂದ 8 ಗಂಟೆವರೆಗೆ ಮನೋ ಮ್ಯೂಸಿಕ್ ಲೈನ್ಸ್ ಮತ್ತು ತಂಡದಿಂದ ಕವಿ, ಕಾವ್ಯ, ಸಂಗೀತ ಸಂಗಮ ಪ್ರಸ್ತುತಿಪಡಿಸಿದರು. ಭಾವಗೀತೆಗಳು, ಸುಮಧುರ ಗೀತೆಗಳ ಗಾಯನ ಕೇಳುಗರನ್ನು ಇಂಪಾಗಿಸಿತು. ರಾತ್ರಿ 8.15 ರಿಂದ 9.30 ರವರೆಗೆ ಎಚ್.ಎಲ್.ಶಿವಶಂಕರ್ ಸ್ವಾಮಿ ಮತ್ತು ತಂಡದವರಿಂದ ರಾಗ ರಿದಂ ಫ್ಯೂಷನ್ನ ಸಂಗೀತಕ್ಕೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…