ಮೈಸೂರು ನಗರ

ಪರಮೇಶಿ ಪ್ರೇಮಪ್ರಸಂಗ : ಡಿ.6ರಂದು ಹಾಸ್ಯನಾಟಕ ಪ್ರದರ್ಶನ

ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು ಅವರು ರಚಿಸಿರುವ ಈ ನಾಟಕವನ್ನು ರವಿಪ್ರಸಾದ್ ನಿರ್ದೇಶಿಸಿದ್ದಾರೆ.

ಪ್ರೇಮಪಾಶದಲ್ಲಿ ಸಿಕ್ಕಿಕೊಂಡು ವಿಲವಿಲನೆ ಒದ್ದಾಡುತ್ತಿರುವ ಪರಮೇಶಿ ಮತ್ತು ಕೃಷ್ಣೋಜಿ ಎಂಬ ಗೆಳೆಯರು ಅನುಭವಿಸುವ ನಾನಾ ಬಗೆಯ ಪೇಚುಗಳನ್ನು ಈ ಪ್ರಹಸನ ತಿಳಿಹಾಸ್ಯದ ಪಾತಳಿಯಲ್ಲಿ ಬಿಚ್ಚಿಡುತ್ತದೆ. ಇಂಗ್ಲಿಷ್ ಲೇಖಕ, ವುಡ್ ಹೌಸ್ ಕೃತಿಯಿಂದ ಪ್ರೇರೇಪಿತವಾದ, ಶ್ರೀನಿವಾಸ ಪ್ರಭು ಅವರ ರಚನೆಯ ಈ ಪ್ರೇಮ ಪ್ರಸಂಗಕ್ಕೆ ಹೆಸರಾಂತ ವಿನ್ಯಾಸಕಾರ ಹೆಚ್.ಕೆ.ದ್ವಾರಕನಾಥ್ ರಂಗವಿನ್ಯಾಸ ಮಾಡಿದ್ದು, ಬೆಳಕಿನ ವಿನ್ಯಾಸ – ಮಧು ನೀನಾಸಂ, ಸಂಗೀತ ನಿರ್ವಹಣೆ- ಮಂಜು ಮಂಗಲ, ಪ್ರಸಾದನ- ರಾಘವೇಂದ್ರ ಬೂದನೂರ್ ಹಾಗೂ ಹರಿಪ್ರಸಾದ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ. ಈ ನಾಟಕಕ್ಕೆ ರೂ.೧೦೦-೦೦ ಪ್ರವೇಶಧನ ನಿಗದಿಪಡಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9964656482 ಸಂಪರ್ಕಿಸಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

1 hour ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

1 hour ago

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…

1 hour ago

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

3 hours ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

3 hours ago