ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು ಅವರು ರಚಿಸಿರುವ ಈ ನಾಟಕವನ್ನು ರವಿಪ್ರಸಾದ್ ನಿರ್ದೇಶಿಸಿದ್ದಾರೆ.
ಪ್ರೇಮಪಾಶದಲ್ಲಿ ಸಿಕ್ಕಿಕೊಂಡು ವಿಲವಿಲನೆ ಒದ್ದಾಡುತ್ತಿರುವ ಪರಮೇಶಿ ಮತ್ತು ಕೃಷ್ಣೋಜಿ ಎಂಬ ಗೆಳೆಯರು ಅನುಭವಿಸುವ ನಾನಾ ಬಗೆಯ ಪೇಚುಗಳನ್ನು ಈ ಪ್ರಹಸನ ತಿಳಿಹಾಸ್ಯದ ಪಾತಳಿಯಲ್ಲಿ ಬಿಚ್ಚಿಡುತ್ತದೆ. ಇಂಗ್ಲಿಷ್ ಲೇಖಕ, ವುಡ್ ಹೌಸ್ ಕೃತಿಯಿಂದ ಪ್ರೇರೇಪಿತವಾದ, ಶ್ರೀನಿವಾಸ ಪ್ರಭು ಅವರ ರಚನೆಯ ಈ ಪ್ರೇಮ ಪ್ರಸಂಗಕ್ಕೆ ಹೆಸರಾಂತ ವಿನ್ಯಾಸಕಾರ ಹೆಚ್.ಕೆ.ದ್ವಾರಕನಾಥ್ ರಂಗವಿನ್ಯಾಸ ಮಾಡಿದ್ದು, ಬೆಳಕಿನ ವಿನ್ಯಾಸ – ಮಧು ನೀನಾಸಂ, ಸಂಗೀತ ನಿರ್ವಹಣೆ- ಮಂಜು ಮಂಗಲ, ಪ್ರಸಾದನ- ರಾಘವೇಂದ್ರ ಬೂದನೂರ್ ಹಾಗೂ ಹರಿಪ್ರಸಾದ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ. ಈ ನಾಟಕಕ್ಕೆ ರೂ.೧೦೦-೦೦ ಪ್ರವೇಶಧನ ನಿಗದಿಪಡಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9964656482 ಸಂಪರ್ಕಿಸಬಹುದು.
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…
ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…