ಮೈಸೂರು ನಗರ

ಪರಮೇಶಿ ಪ್ರೇಮಪ್ರಸಂಗ : ಡಿ.6ರಂದು ಹಾಸ್ಯನಾಟಕ ಪ್ರದರ್ಶನ

ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು ಅವರು ರಚಿಸಿರುವ ಈ ನಾಟಕವನ್ನು ರವಿಪ್ರಸಾದ್ ನಿರ್ದೇಶಿಸಿದ್ದಾರೆ.

ಪ್ರೇಮಪಾಶದಲ್ಲಿ ಸಿಕ್ಕಿಕೊಂಡು ವಿಲವಿಲನೆ ಒದ್ದಾಡುತ್ತಿರುವ ಪರಮೇಶಿ ಮತ್ತು ಕೃಷ್ಣೋಜಿ ಎಂಬ ಗೆಳೆಯರು ಅನುಭವಿಸುವ ನಾನಾ ಬಗೆಯ ಪೇಚುಗಳನ್ನು ಈ ಪ್ರಹಸನ ತಿಳಿಹಾಸ್ಯದ ಪಾತಳಿಯಲ್ಲಿ ಬಿಚ್ಚಿಡುತ್ತದೆ. ಇಂಗ್ಲಿಷ್ ಲೇಖಕ, ವುಡ್ ಹೌಸ್ ಕೃತಿಯಿಂದ ಪ್ರೇರೇಪಿತವಾದ, ಶ್ರೀನಿವಾಸ ಪ್ರಭು ಅವರ ರಚನೆಯ ಈ ಪ್ರೇಮ ಪ್ರಸಂಗಕ್ಕೆ ಹೆಸರಾಂತ ವಿನ್ಯಾಸಕಾರ ಹೆಚ್.ಕೆ.ದ್ವಾರಕನಾಥ್ ರಂಗವಿನ್ಯಾಸ ಮಾಡಿದ್ದು, ಬೆಳಕಿನ ವಿನ್ಯಾಸ – ಮಧು ನೀನಾಸಂ, ಸಂಗೀತ ನಿರ್ವಹಣೆ- ಮಂಜು ಮಂಗಲ, ಪ್ರಸಾದನ- ರಾಘವೇಂದ್ರ ಬೂದನೂರ್ ಹಾಗೂ ಹರಿಪ್ರಸಾದ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ. ಈ ನಾಟಕಕ್ಕೆ ರೂ.೧೦೦-೦೦ ಪ್ರವೇಶಧನ ನಿಗದಿಪಡಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9964656482 ಸಂಪರ್ಕಿಸಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago