ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು ಅವರು ರಚಿಸಿರುವ ಈ ನಾಟಕವನ್ನು ರವಿಪ್ರಸಾದ್ ನಿರ್ದೇಶಿಸಿದ್ದಾರೆ.
ಪ್ರೇಮಪಾಶದಲ್ಲಿ ಸಿಕ್ಕಿಕೊಂಡು ವಿಲವಿಲನೆ ಒದ್ದಾಡುತ್ತಿರುವ ಪರಮೇಶಿ ಮತ್ತು ಕೃಷ್ಣೋಜಿ ಎಂಬ ಗೆಳೆಯರು ಅನುಭವಿಸುವ ನಾನಾ ಬಗೆಯ ಪೇಚುಗಳನ್ನು ಈ ಪ್ರಹಸನ ತಿಳಿಹಾಸ್ಯದ ಪಾತಳಿಯಲ್ಲಿ ಬಿಚ್ಚಿಡುತ್ತದೆ. ಇಂಗ್ಲಿಷ್ ಲೇಖಕ, ವುಡ್ ಹೌಸ್ ಕೃತಿಯಿಂದ ಪ್ರೇರೇಪಿತವಾದ, ಶ್ರೀನಿವಾಸ ಪ್ರಭು ಅವರ ರಚನೆಯ ಈ ಪ್ರೇಮ ಪ್ರಸಂಗಕ್ಕೆ ಹೆಸರಾಂತ ವಿನ್ಯಾಸಕಾರ ಹೆಚ್.ಕೆ.ದ್ವಾರಕನಾಥ್ ರಂಗವಿನ್ಯಾಸ ಮಾಡಿದ್ದು, ಬೆಳಕಿನ ವಿನ್ಯಾಸ – ಮಧು ನೀನಾಸಂ, ಸಂಗೀತ ನಿರ್ವಹಣೆ- ಮಂಜು ಮಂಗಲ, ಪ್ರಸಾದನ- ರಾಘವೇಂದ್ರ ಬೂದನೂರ್ ಹಾಗೂ ಹರಿಪ್ರಸಾದ್ ವಸ್ತ್ರ ವಿನ್ಯಾಸ ಮಾಡಿರುತ್ತಾರೆ. ಈ ನಾಟಕಕ್ಕೆ ರೂ.೧೦೦-೦೦ ಪ್ರವೇಶಧನ ನಿಗದಿಪಡಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9964656482 ಸಂಪರ್ಕಿಸಬಹುದು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…