ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ಅನಾಮಿಕರು ಒಂದಲ್ಲಾ ಒಂದು ರೀತಿ ಹಿಂಸೆ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಅರಮನೆ ಆವರಣಕ್ಕೆ ಪ್ರತಿ ದಿನವೂ ಹಲವು ಅನಾಮಿಕರು ಬಂದು ಆನೆ ಸೊಂಡಿಲು ಹಾಗೂ ದಂತಗಳನ್ನು ಹಿಡಿದು ರೀಲ್ಸ್ ಮಾಡುತ್ತಿದ್ದಾರೆ.
ಆನೆಗಳ ಮುಂದೆ ಫೋಟೋಶೂಟ್ ಮಾಡಿಸಲು ಅರಣ್ಯ ಅಧಿಕಾರಿಗಳು ಅನುಮತಿ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಗಂಭೀರ ಆರೋಪ ಮಾಡಿದ್ದಾರೆ.
ಮೊನ್ನೆ ತಾನೇ ಕಂಜನ್ ಹಾಗೂ ಧನಂಜಯ ಆನೆಗಳ ನಡುವೆ ಕಾಳಗ ನಡೆದು ಭಾರೀ ಆತಂಕ ಸೃಷ್ಟಿಯಾಗಿತ್ತು. ಆದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅರಮನೆ ಆವರಣಕ್ಕೆ ಬರುವ ಅನಾಮಿಕ ವ್ಯಕ್ತಿಗಳ ರೀಲ್ಸ್ ಹುಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರೀಲ್ಸ್ ಹೆಸರಿನಲ್ಲಿ ಏನೂ ಅರಿಯದ ಮೂಕ ಪ್ರಾಣಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದು, ಇದಕ್ಕೆ ಆದಷ್ಟು ಬೇಗ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…