ಮೈಸೂರು ನಗರ

ಮೈಸೂರಿನ ಕೆಲವೆಡೆ ಶಾಶ್ವತ ಕಾಮಗಾರಿ ನಡೆಯುತ್ತಿದೆ: ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌

ಮೈಸೂರು: ಮೈಸೂರು ನಗರದಲ್ಲಿ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಪ್ರತಿಕ್ರಿಯೆ ನೀಡಿದ್ದು, ಕೆಲವೆಡೆ ಶಾಶ್ವತ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾವು ಸಹಜವಾಗಿ ಮೇ ತಿಂಗಳಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸುತ್ತೇವೆ. ಮಳೆಗಾಲದ ಸಮಸ್ಯೆಗಳನ್ನು ಅರಿತು ಮುಂಚಿತವಾಗಿಯೇ ಕಾಮಗಾರಿಗಳನ್ನು ಮಾಡುತ್ತೇವೆ. ಈ ಬಾರಿ ಮುಂಚಿತವಾಗಿಯೇ ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಕೆಲವೆಡೆಗಳಲ್ಲಿ ಸಮಸ್ಯೆಗಳು ಎದುರಾಗಿದೆ. ಮಳೆಗಾಲದಲ್ಲಿ ನೀರಿನ ರಭಸಕ್ಕೆ ಕೆಲವೆಡೆ ಯುಜಿಡಿ ತೆರೆದುಕೊಳ್ಳುತ್ತಿವೆ. ಆಯಾ ಸ್ಥಳಗಳ ಜನಸಂಖ್ಯೆಗೆ ಅನುಗುಣವಾಗಿ ಅಗತ್ಯಕ್ಕೆ ತಕ್ಕಂತೆ ಪೈಪ್‌ಗಳನ್ನು ಅಳವಡಿಸಿರುತ್ತೇವೆ. ಆ ಭಾಗದಲ್ಲಿ ಜನಸಂಖ್ಯೆ ಹೆಚ್ಚಾಗಿ, ಬಳಕೆ ಹೆಚ್ಚಾದಾಗ ಈ ರೀತಿಯ ಸಮಸ್ಯೆಗಳು ಎದುರಾಗುತ್ತದೆ.

ಸದ್ಯ ಸಮಸ್ಯೆ ಎದುರಾದ ಸ್ಥಳಗಳಲ್ಲಿ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಯುಜಿಡಿ ಸಮಸ್ಯೆಗಳನ್ನೂ ಸರಿಪಡಿಸುತ್ತಿದ್ದೇವೆ. ಕೆಲವು ಕಡೆಗಳಲ್ಲಿ ಶಾಶ್ವತ ಕಾಮಗಾರಿಯನ್ನು ಮಾಡುತ್ತಿದ್ದೇವೆ. ಸಮಸ್ಯೆಗಳು ಹೆಚ್ಚಾದಾಗ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಣೆಗೆ ವಿಶೇಷ ತಂಡ ರಚನೆ ಮಾಡಿದ್ದೇವೆ. ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕಾರ್ಯ ಕಳೆದ ಮೂರು ತಿಂಗಳಿನಿಂದಲೇ ನಡೆಯುತ್ತಿದೆ. ಸದ್ಯ ಮಳೆಯಿಂದ ನಗರದಲ್ಲಿ ಇಲ್ಲಿಯವರೆಗೂ ಯಾವುದೇ ಹಾನಿ ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

12 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

12 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

12 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

12 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

12 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

12 hours ago