ಮೈಸೂರು ನಗರ

ಮೈಸೂರಿನ ಕೆಲವೆಡೆ ಶಾಶ್ವತ ಕಾಮಗಾರಿ ನಡೆಯುತ್ತಿದೆ: ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌

ಮೈಸೂರು: ಮೈಸೂರು ನಗರದಲ್ಲಿ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಪ್ರತಿಕ್ರಿಯೆ ನೀಡಿದ್ದು, ಕೆಲವೆಡೆ ಶಾಶ್ವತ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾವು ಸಹಜವಾಗಿ ಮೇ ತಿಂಗಳಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸುತ್ತೇವೆ. ಮಳೆಗಾಲದ ಸಮಸ್ಯೆಗಳನ್ನು ಅರಿತು ಮುಂಚಿತವಾಗಿಯೇ ಕಾಮಗಾರಿಗಳನ್ನು ಮಾಡುತ್ತೇವೆ. ಈ ಬಾರಿ ಮುಂಚಿತವಾಗಿಯೇ ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಕೆಲವೆಡೆಗಳಲ್ಲಿ ಸಮಸ್ಯೆಗಳು ಎದುರಾಗಿದೆ. ಮಳೆಗಾಲದಲ್ಲಿ ನೀರಿನ ರಭಸಕ್ಕೆ ಕೆಲವೆಡೆ ಯುಜಿಡಿ ತೆರೆದುಕೊಳ್ಳುತ್ತಿವೆ. ಆಯಾ ಸ್ಥಳಗಳ ಜನಸಂಖ್ಯೆಗೆ ಅನುಗುಣವಾಗಿ ಅಗತ್ಯಕ್ಕೆ ತಕ್ಕಂತೆ ಪೈಪ್‌ಗಳನ್ನು ಅಳವಡಿಸಿರುತ್ತೇವೆ. ಆ ಭಾಗದಲ್ಲಿ ಜನಸಂಖ್ಯೆ ಹೆಚ್ಚಾಗಿ, ಬಳಕೆ ಹೆಚ್ಚಾದಾಗ ಈ ರೀತಿಯ ಸಮಸ್ಯೆಗಳು ಎದುರಾಗುತ್ತದೆ.

ಸದ್ಯ ಸಮಸ್ಯೆ ಎದುರಾದ ಸ್ಥಳಗಳಲ್ಲಿ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಯುಜಿಡಿ ಸಮಸ್ಯೆಗಳನ್ನೂ ಸರಿಪಡಿಸುತ್ತಿದ್ದೇವೆ. ಕೆಲವು ಕಡೆಗಳಲ್ಲಿ ಶಾಶ್ವತ ಕಾಮಗಾರಿಯನ್ನು ಮಾಡುತ್ತಿದ್ದೇವೆ. ಸಮಸ್ಯೆಗಳು ಹೆಚ್ಚಾದಾಗ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಣೆಗೆ ವಿಶೇಷ ತಂಡ ರಚನೆ ಮಾಡಿದ್ದೇವೆ. ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕಾರ್ಯ ಕಳೆದ ಮೂರು ತಿಂಗಳಿನಿಂದಲೇ ನಡೆಯುತ್ತಿದೆ. ಸದ್ಯ ಮಳೆಯಿಂದ ನಗರದಲ್ಲಿ ಇಲ್ಲಿಯವರೆಗೂ ಯಾವುದೇ ಹಾನಿ ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

10 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

58 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago