ಮೈಸೂರು ನಗರ

ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋ ಸ್ಥಳಾಂತರಕ್ಕೆ ವಿರೋಧ: ಪೆಟ್ರೋಲಿಯಂ ಡೀಲರ್ಸ್ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋ ಸ್ಥಳಾಂತರಕ್ಕೆ ಮುಂದಾದ ಇಂಡಿಯನ್ ಆಯಿಲ್ ಕಂಪನಿ ವಿರುದ್ಧ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ.

ಕಳೆದ 65 ವರ್ಷಗಳಿಂದ ಮೈಸೂರಿನಲ್ಲಿರುವ ಪೆಟ್ರೋಲ್‌ ಡಿಪೋವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಯತ್ನಿಸಲಾಗಿದ್ದು, ಇದಕ್ಕೆ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ಡಿಪೋ ಉಳಿಸುವಂತೆ ಆಗ್ರಹಿಸಿ ಫೆಡರೇಶನ್ ಆಫ್ ಮೈಸೂರು ಪೆಟ್ರೋಲಿಯಂ ಟ್ರೇಡರ್ಸ್ ಸಂಘಟನೆ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ.

ಪ್ರತಿಭಟನಾ ಸ್ಥಳಕ್ಕೆ ಇಂಡಿಯನ್ ಪೆಟ್ರೋಲಿಯಂ ವಿಭಾಗೀಯ ಅಧಿಕಾರಿ ಡಿಎಂಓ ಮದನೇಶ್ವರನ್ ಭೇಟಿ ನೀಡಿ ಡೀಲರ್ಸ್‌ಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಯಾವುದೇ ಕಾರಣಕ್ಕೂ ಪೆಟ್ರೋಲ್ ಡಿಪೋ ಸ್ಥಳಾಂತರ ಮಾಡಬಾರದು. ಒಂದು ವೇಳೆ ಸ್ಥಳಾಂತರ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago