PhD admission rejection:
ಮೈಸೂರು: ಪಿಎಚ್ಡಿ ಪ್ರವೇಶಾತಿ ನಿರಾಕರಣೆ ಮಾಡಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್ಡಿ ಆಕಾಂಕ್ಷಿ ವಿದ್ಯಾರ್ಥಿಗಳು ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದರು.
ಮೈಸೂರು ವಿವಿ ಆಡಳಿತದ ವಿರುದ್ಧ ವಿದ್ಯಾರ್ಥಿಗಳು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಾಧ್ಯಾಪಕರಿಗೆ ಹೆಚ್ಚುವರಿ ಗೈಡ್ ಅವಕಾಶ ನೀಡಲು ಆಗ್ರಹಿಸಿದರು.
ವಿಶ್ವವಿದ್ಯಾನಿಲಯವು ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕೊಡಲಿ ಇಡುತ್ತಿದೆ ಎಂದು ಆರೋಪಿಸಿದರು.
ಪ್ರಸ್ತುತ ಸಹ ಪ್ರಾಧ್ಯಾಪಕ 4, ಸಹಾಯಕ ಪ್ರಾಧ್ಯಾಪಕ 6, ಪ್ರಾಧ್ಯಾಪಕ 8 ವಿದ್ಯಾರ್ಥಿಗಳಿಗೆ ಪಿಎಚ್ಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಹೆಚ್ಚುವರಿಯಾಗಿ ಸಹ ಪ್ರಾಧ್ಯಾಪಕ 2, ಸಹಾಯಕ ಪ್ರಾಧ್ಯಾಪಕ 3, ಪ್ರಾಧ್ಯಾಪಕರಿಗೆ 4 ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಲು ಅವಕಾಶ ನೀಡುವಂತೆ ಪ್ರತಿಭಟನೆಯಲ್ಲಿ ಮನವಿ ಮಾಡಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…