ಮೈಸೂರು ನಗರ

ಮೈಸೂರು | ಶಿಷ್ಯ ವೇತನಕ್ಕೆ ಒತ್ತಾಯಿಸಿ ಸಂಶೋಧಕರ ಅಹೋರಾತ್ರಿ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಒಳಗೂಡಿ ಮೈಸೂರು ವಿ.ವಿ ಸಂಶೋಧಕರು ಆಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ನಗರದ ಕ್ರಾಫಡ್೯ ಹಾಲ್ ಬಳಿಯೇ ಸೋಮವಾರ ರಾತ್ರಿಯಿಂದಲೇ ಅಹೋರಾತ್ರಿ ಧರಣಿ ಕೈಗೊಂಡಿದ್ದು ಕೂಡಲೇ ಶಿಷ್ಯವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಧರಣಿ ನಿರತರು, 2026-2027ನೇ ಸಾಲಿನಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷ ಘಟಕದ ವತಿಯಿಂದ ನೀಡಲಾಗುವ ಶಿಷ್ಯವೇತನಕ್ಕೆ 2025 ಹಾಗೂ 2026 ನೇ ಸಾಲಿನ ಸಂಶೋಧಕರುಗಳು ಸೇರಿ ಒಟ್ಟು 96 ಅರ್ಜಿಗಳನ್ನು ಸಲ್ಲಿಸಿರುತ್ತೇವೆ. ಆದರೆ ಮೈಸೂರು ವಿಶ್ವವಿದ್ಯಾನಿಲಯವು ಕೇವಲ 20 ಸಂಶೋಧಕರುಗಳಿಗೆ ಮಾತ್ರ ಶಿಷ್ಯವೇತನ ಮಂಜೂರು ಮಾಡಿರುವುದು ವಿದ್ಯಾರ್ಥಿ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳು ಶಿಷ್ಯವೇತನರಹಿತವಾಗಿ ಪಿಎಚ್.ಡಿ. ಪದವಿ ಪಡೆಯಲು ಹರಸಾಹಸ ಪಡುವಂತಾಗಿದೆ. ಮೈಸೂರು ವಿಶ್ವವಿದ್ಯಾನಿಲಯವು ಕಳೆದ ವರ್ಷಗಳಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಸಂಶೋಧಕರುಗಳಿಗೂ ಶಿಷ್ಯವೇತನ ಮಂಜೂರು ಮಾಡಿದೆ. ಆದರೆ ಈ ಬಾರಿ ಕುಂಟು ನೆಪ ಹೇಳಿ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಅದಾಗಿಯೂ, ಹೆಚ್ಚುವರಿ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳಿಗೆ ವರ್ಷಕ್ಕೆ ರೂ. 23 ಕೋಟಿಗಳನ್ನು ಅನಾವಶ್ಯಕವಾಗಿ ನೀಡುತ್ತಿದ್ದು, ಇದು ವಿಶ್ವವಿದ್ಯಾನಿಲಯದ ಹಣ ಪೋಲಾಗುತ್ತಿರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ. ಅದಲ್ಲದೆ, ಈ ವರ್ಷದ ವಿಶ್ವವಿದ್ಯಾನಿಲಯದ ಬಜೆಟ್‌ನ ಒಟ್ಟು ರೂ. 400 ಕೋಟಿಗಳಲ್ಲಿ ನಿಯಮಾನುಸಾರ 24% ಮೊತ್ತವನ್ನು ಎಸ್.ಸಿ./ಎಸ್.ಟಿ. ಉಪಯೋಜನೆಗಳಿಗೆ ಮೀಸಲಿಟ್ಟರೆ ಸರಿ ಸುಮಾರು ರೂ. 96 ರಿಂದ 97 ಕೋಟಿ ನೀಡಬೇಕಾಗುತ್ತದೆ. ಆದರೆ ವಿಶ್ವವಿದ್ಯಾನಿಲಯವು ಎಸ್.ಸಿ./ಎಸ್.ಟಿ. ಸಂಶೋಧನೆಗೆ ಯಾವುದೇ ರೀತಿಯ ಮೊತ್ತವನ್ನು ಮೀಸಲಿಡದೆ ವಂಚಿಸುತ್ತಿದೆ ಎಂದು ದೂರಿದರು.

ಈ ಹಿಂದೆ ಪ್ರತಿಭಟನೆಯನ್ನು ಮಾಡಿದಾಗ ಸ್ಥಳಕ್ಕೆ ಬಂದ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳು ಸೋಮವಾರ ನಿಮಗೆ ಆರ್ಡರ್ ಕಾಪಿ ನೀಡುತ್ತೇನೆ ಎಂದು ಮಾತು ಕೊಟ್ಟರು ಅದರಂತೆ ಜೂನ್ 1 ರ ಸೋಮವಾರ ಹೋಗಿ ಕುಲಪತಿಗಳನ್ನ ಭೇಟಿಯಾದಾಗ ಕುಲಪತಿಗಳು ಜೂನ್ 10ನೇ ತಾರೀಕಿನವರೆಗೆ ನನಗೆ ಸಮಯ ಕೊಡಿ ಅಲ್ಲಿಯವರೆಗೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದರು. ಅದರಂತೆ 15 ದಿನಗಳ ಕಾಲ ನಾವು ಸಮಯವನ್ನು ನೀಡಿ ಇಂದು ಬಂದು ಕೇಳಿದಾಗ ಕುಲಪತಿಗಳು ವಿದ್ಯಾರ್ಥಿಗಳ ನಡುವಿನ ಸೌಜನ್ಯಕ್ಕಾದರೂ ಮಾತನಾಡದೆ ಸಭೆ ನಡುವೆ ಎದ್ದು ಹೋಗಿ ಅವರ ದಲಿತ ವಿರೋಧಿ ನಡೆಯನ್ನ ತೋರಿಸಿದ್ದಾರೆ ಹಾಗಾಗಿ ನಾವುಗಳು ಕುಲಪತಿಗಳು ಬಂದು ನಮ್ಮ ಸಮಸ್ಯೆಯನ್ನು ಬಗೆಹರಿಸುವವರೆಗೂ ಈ ಸ್ಥಳದಿಂದ ಹೇಳುವುದಿಲ್ಲ ಎಂದು ಧರಣಿ ನಡೆಸುತ್ತಿದ್ದಾರೆ.

ಧರಣಿಯಲ್ಲಿ ಸಂಶೋಧಕರುಗಳಾದ, ನವೀನ್‌ ಕೋಳುರು, ರವಿಕುಮಾರ್, ಮೌನ, ದೀಪ, ನವೀನ್‌ ಅಳಗಂಜಿ, ಸಣ್ಣಮಾದು, ಸಿದ್ಧರಾಜು, ಧೀರಾಜ್‌, ಮಹೇಶ್‌, ಶಿವರಾಜು ದಸಂಸ ಜಿಲ್ಲಾ ಸಂಚಾಲ ಚೋರನಹಳ್ಳಿ, ಎಡದೊರೆ ಮಹದೇವಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು‌.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

21 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

22 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 days ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 days ago