ಮೈಸೂರು ನಗರ

ಪಿರಿಯಾಪಟ್ಟಣದಲ್ಲಿ ಶಾಲಾ ವಾಹನ ಪಲ್ಟಿ ಪ್ರಕರಣ: ಮಕ್ಕಳು ಆರೋಗ್ಯವಾಗಿದ್ದಾರೆ ಎಂದ ಚಲುವಾಂಬ ಆಸ್ಪತ್ರೆ ವೈದ್ಯರು

ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ವೈದ್ಯರು, ಗಾಯಗೊಂಡಿದ್ದ 11 ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಓರ್ವ ವಿದ್ಯಾರ್ಥಿಗೆ ಹೆಚ್ಚಿನ ಗಾಯವಾಗಿದ್ದು, ಉಳಿದ 10 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಶಾಲಾ ವಾಹನದ ಚಾಲಕ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದು, ಇಂದು ಬೆಳಗ್ಗೆ 8:30ರ ವೇಳೆಯಲ್ಲಿ 11 ಮಕ್ಕಳ ಸಮೇತ ವಾಹನದಲ್ಲಿ ಬರುವ ವೇಳೆ ಘಟನೆ ಸಂಭವಿಸಿದೆ.

ಇದ್ದಕ್ಕಿದ್ದ ಹಾಗೆ ವಾಹನದ ಸ್ಟೇರಿಂಗ್ ನಿಯಂತ್ರಣಕ್ಕೆ ಸಿಗದ ಪರಿಣಾಮ ವಾಹನ ಹಳ್ಳಕ್ಕೆ ಬಿದ್ದಿದೆ. ಸದ್ಯ ಅಕ್ಕಪಕ್ಕದಲ್ಲೂ ವಾಹನಗಳು ಸಂಚರಿಸುತ್ತಿದ್ದವು. ಸ್ಥಳೀಯರು ಶೀಘ್ರವೇ ನೆರವಿಗೆ ಬಂದರು, ನನಗೆ ತಲೆಗೆ ಹಾಗೂ ಮೂಗಿನ ಭಾಗಕ್ಕೆ ಪೆಟ್ಟಾಗಿದೆ. ಉಳಿದಂತೆ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಗೊಂಡಿರುವ ಮಕ್ಕಳು ಚಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಘಟನೆ ಬಗ್ಗೆ ವಿವರಿಸಿದರು.

ಅಪಘಾತದ ವಿಡಿಯೋ ನೋಡಿ:-

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 mins ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

7 mins ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

11 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

47 mins ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

56 mins ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

1 hour ago