ಮೈಸೂರು ನಗರ

ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ: ಸಚಿವ ವಿ.ಸೋಮಣ್ಣ

ಮೈಸೂರು: ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಷ್ಟೇ ಮೈಸೂರಿಗೂ ಆದ್ಯತೆ ನೀಡಲಾಗುವುದು. ವಂದೇ ಭಾರತ್ ಹೆಚ್ಚಿನ‌ ಟ್ರೈನ್‌ಗಳನ್ನು ಓಡಿಸಲಾಗುವುದು. ಒಟ್ಟಾರೆಯಾಗಿ ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ಪ್ರಾರಂಭಿಸಲಾಗುವುದು ಎಂದರು.

ಇನ್ನು ನಂಜನಗೂಡು ಭಾಗದಲ್ಲಿ ಸೇತುವೆಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಧಿಕಾರಿಗಳು, ಜನಪ್ರತಿನಿಧಿಗಳ ನಡುವೆ ಗೊಂದಲವಿದೆ. ಆ ಕಾರಣಕ್ಕೆ‌ ನಾನೇ ಖುದ್ದು ನಂಜನಗೂಡಿಗೆ ತೆರಳುತ್ತಿರುವೆ ಎಂದು ಹೇಳಿದರು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ: ಅಮಿತ್‌ ಶಾ ಭೇಟಿಯಾದ ಸ್ವಾಮೀಜಿಗಳ ನಿಯೋಗ

ಇನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್.15ರಂದು ಮಾತನಾಡಿದ್ದರು. ವಿತ್ತ ಸಚಿವರು ಜಿಎಎಸ್‌ಟಿ‌ ವಿಚಾರದಲ್ಲಿ ಉತ್ತಮ ಕೆಲಸ‌ ಮಾಡುತ್ತಿದ್ದಾರೆ. ದಸರಾ, ದೀಪಾವಳಿಗೆ ರಾಜ್ಯಕ್ಕೆ ಒಳ್ಳೆಯ ಗಿಫ್ಟ್ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಬಿಹಾರದ ಎಲೆಕ್ಷನ್‌ ಇರುವ ಕಾರಣ ಈಗ ಅಭಿವೃದ್ದಿ ಮಾಡ್ತಾರೆ ಎಂಬುದು ಸುಳ್ಳು. ನಾವು ನಿರಂತರ ಅಭಿವೃದ್ಧಿ ಕೆಲಸದಲ್ಲಿ ತೊಡಗಿದ್ದೇವೆ. ತುಮಕೂರಿನಲ್ಲಿ 50 ವರ್ಷಕ್ಕೆ ‌ಬೇಕಾಗುವಷ್ಟು ಕೆಲಸ ತಂದಿದ್ದೇವೆ. ಆ ಕಾರಣಕ್ಕೆ ಪುನಃ ಅಲ್ಲಿ ಚುನಾವಣೆಗೆ ನಿಲ್ಲಲ್ಲ ಎಂದಿರುವೆ ಅಷ್ಟೆ. ಅದು ಬಿಟ್ಟರೆ ಬೇರೂ ಏನೂ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

20 mins ago

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

47 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago