ಮೈಸೂರು ನಗರ

ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ: ಸಚಿವ ವಿ.ಸೋಮಣ್ಣ

ಮೈಸೂರು: ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಷ್ಟೇ ಮೈಸೂರಿಗೂ ಆದ್ಯತೆ ನೀಡಲಾಗುವುದು. ವಂದೇ ಭಾರತ್ ಹೆಚ್ಚಿನ‌ ಟ್ರೈನ್‌ಗಳನ್ನು ಓಡಿಸಲಾಗುವುದು. ಒಟ್ಟಾರೆಯಾಗಿ ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ ಪ್ರಾರಂಭಿಸಲಾಗುವುದು ಎಂದರು.

ಇನ್ನು ನಂಜನಗೂಡು ಭಾಗದಲ್ಲಿ ಸೇತುವೆಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಧಿಕಾರಿಗಳು, ಜನಪ್ರತಿನಿಧಿಗಳ ನಡುವೆ ಗೊಂದಲವಿದೆ. ಆ ಕಾರಣಕ್ಕೆ‌ ನಾನೇ ಖುದ್ದು ನಂಜನಗೂಡಿಗೆ ತೆರಳುತ್ತಿರುವೆ ಎಂದು ಹೇಳಿದರು.

ಇದನ್ನು ಓದಿ: ಧರ್ಮಸ್ಥಳ ಪ್ರಕರಣ: ಅಮಿತ್‌ ಶಾ ಭೇಟಿಯಾದ ಸ್ವಾಮೀಜಿಗಳ ನಿಯೋಗ

ಇನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್.15ರಂದು ಮಾತನಾಡಿದ್ದರು. ವಿತ್ತ ಸಚಿವರು ಜಿಎಎಸ್‌ಟಿ‌ ವಿಚಾರದಲ್ಲಿ ಉತ್ತಮ ಕೆಲಸ‌ ಮಾಡುತ್ತಿದ್ದಾರೆ. ದಸರಾ, ದೀಪಾವಳಿಗೆ ರಾಜ್ಯಕ್ಕೆ ಒಳ್ಳೆಯ ಗಿಫ್ಟ್ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಬಿಹಾರದ ಎಲೆಕ್ಷನ್‌ ಇರುವ ಕಾರಣ ಈಗ ಅಭಿವೃದ್ದಿ ಮಾಡ್ತಾರೆ ಎಂಬುದು ಸುಳ್ಳು. ನಾವು ನಿರಂತರ ಅಭಿವೃದ್ಧಿ ಕೆಲಸದಲ್ಲಿ ತೊಡಗಿದ್ದೇವೆ. ತುಮಕೂರಿನಲ್ಲಿ 50 ವರ್ಷಕ್ಕೆ ‌ಬೇಕಾಗುವಷ್ಟು ಕೆಲಸ ತಂದಿದ್ದೇವೆ. ಆ ಕಾರಣಕ್ಕೆ ಪುನಃ ಅಲ್ಲಿ ಚುನಾವಣೆಗೆ ನಿಲ್ಲಲ್ಲ ಎಂದಿರುವೆ ಅಷ್ಟೆ. ಅದು ಬಿಟ್ಟರೆ ಬೇರೂ ಏನೂ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago