ಮೈಸೂರು: ಪ್ಲಾಸ್ಟಿಕ್ ಮುಕ್ತ ಮೈಸೂರಿಗೆ ಪಾಲಿಕೆ ಅಧಿಕಾರಿಗಳು ಕಠಿಣ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದು, ಮನೆ ಮನೆಗೆ ತೆರಳಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಮುಕ್ತ ಮೈಸೂರಿಗೆ ಸಾರ್ವಜನಿಕರು ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ನಗರದ ಚಾಮುಂಡಿಪುರಂನಲ್ಲಿ ಕೆಎಂಪಿಕೆ ಟ್ರಸ್ಟ್ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತದಿನದ ಅಂಗವಾಗಿ ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಘೋಷವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮನೆ ಮನೆಗಳಿಗೆ ಬಟ್ಟೆ ಬ್ಯಾಗ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್ ಅವರು, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೊಬ್ಬರೂ ತ್ಯಜಿಸಬೇಕು. ಆ ಮೂಲಕ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಾಲಿಕೆ ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಪೌರಕಾರ್ಮಿಕರು, ನಗರ ಪಾಲಿಕೆ ಅಧಿಕಾರಿಗಳು ಭಾಗಿಯಾಗಿದ್ದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…