ಮೈಸೂರು ನಗರ

ಮನಮೋಹನ್‌ ಸಿಂಗ್‌ ನಿಧನ, ಏಳು ದಿನ ಶೋಕಾಚರಣೆ: ಡಿ.31 ರಂದು ಪೊಲೀಸ್‌ ಬ್ಯಾಂಡ್‌, ಹಸಿರು ಪಟಾಕಿ ಪ್ರದರ್ಶನ ರದ್ದು

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನಲೆಯಲ್ಲಿ ಡಿಸೆಂಬರ್‌.31 ರಂದು ಆಯೋಜಿಸಲಾಗಿದ್ದ ಪೊಲೀಸ್‌ ಬ್ಯಾಂಡ್‌ ಮತ್ತು ಪಟಾಕಿ ಪ್ರದರ್ಶನವನ್ನು ರದ್ದು ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿರುವ ಕಾರಣ ‌ಮೈಸೂರು ಅರಮನೆಯಲ್ಲಿ ಡಿಸೆಂಬರ್‌.31 ರಂದು ರಾತ್ರಿ 11 ರೀಮದ 12 ಗಂಟೆಯವರೆಗೆ ಪೊಲೀಸ್‌ ಬ್ಯಾಂಡ್‌ ಆಯೋಜಿಸಲಾಗಿರುವುದನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 2025ರ ಜನವರಿ ಮುಂಜಾನೆ 12 ರಿಂದ 12.15 ಗಂಟೆಯವರೆಗೂ ಆಯೋಜಿಸಲಾಗಿದ್ದ ಹಸಿರು ಪಟಾಕಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಮಣ್ಯ ಅವರು ತಿಳಿಸಿದ್ದಾರೆ.

ಪ್ರತಿವರ್ಷ ಅರಮನೆ ಆವರಣದಲ್ಲಿ ಅರಮನೆ ಮಂಡಳಿ ವತಿಯಿಂದ ಡಿಸೆಂಬರ್‌ ತಿಂಗಳ ಕೊನೆಯ ದಿನ ಹಾಗೂ ಜನವರಿ ಮೊದಲ ದಿನದಂದು ಸಾರ್ವಜನಿಕರಿಗಾಗಿ ಮಧ್ಯರಾತ್ರಿ ವೇಳೆ ಪೊಲೀಸ್‌ ಬ್ಯಾಂಡ್‌ ಹಾಗೂ ಹಸಿರು ಪಟಾಕಿ ಪ್ರದರ್ಶನವನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿರುತ್ತದೆ ಎಂದು ಆದೇಶ ಹೊರಡಿಸಲಾಗಿದೆ. ಹೀಗಾಗಿ ಈ ವರ್ಷ ಆ ಎರಡೂ ದಿನಗಳ ಕಾಲ ಪೊಲೀಸ್‌ ಬ್ಯಾಂಡ್‌ ಮತ್ತು ಹಸಿರು ಪಟಾಕಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

8 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

8 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

8 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

8 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

8 hours ago