ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್ ಸೈಲೆನ್ಸರ್ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಕರ್ಕಶ ಶಬ್ಧ ಮಾಡುತ್ತಿದ್ದ 90 ಕ್ಕೂ ಹೆಚ್ಚು ಬೈಕ್ಗಳನ್ನು ಸೀಜ್ ಮಾಡಿದ್ದರು.
ಇದೀಗ ಇಂದು ಬೆಳಿಗ್ಗೆ ಬೈಕ್ಗಳ 217 ಸೈಲೆನ್ಸರ್ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ.
ಇದೆಲ್ಲಾ ಬೆಳವಣಿಗೆಗಳ ನಡುವೆ ಕಾನೂನು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದು, ಸೀಜ್ ಮಾಡಿದ ವಾಹನಗಳಿಗೆ ಫೈನ್ ಹಾಕಿದ್ದಲ್ಲದೇ ವಾರ್ನಿಂಗ್ ಕೊಟ್ಟು ರಿಲೀಸ್ ಮಾಡಿದ್ದಾರೆ.
ಈ ಮೂಲಕ ಮೈಸೂರು ನಗರದಾದ್ಯಂತ ಕಾನೂನು ನಿಯಮ ಉಲ್ಲಂಘನೆ ಮಾಡುವವರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಆಗದಂತೆ ಸೂಚನೆ ನೀಡಲಾಗಿದೆ.
ಒಂದು ವೇಳೆ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಬೈಕ್ ಸೀಜ್ ಮಾಡುವುದರ ಜೊತೆಗೆ ಇನ್ನು ಹೆಚ್ಚಿನ ದಂಡ ವಿಧಿಸಲು ಪೊಲೀಸರು ಪ್ಲಾನ್ ಮಾಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…