Police officer who stepped up for passenger safety Huge praise from public
ಮೈಸೂರು: ಸರ್ಕಾರಿ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಸಿಲುಕಿ ಹೊರಬಂದು ಅಸಹಾಯಕರಾಗಿ ನಿಂತಿದ್ದ ಚಾಮುಂಡಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿರವರು ಧಾವಿಸಿ ಸಾರ್ವಜನಿಕ ಕಳಕಳಿ ಮೆರೆದಿದ್ದಾರೆ. ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಆತಂಕ ದೂರವಾಗಿದ್ದು, ಬಿಂದುಮಣಿ ಅವರ ಸರಳತೆಗೆ ಚಾಮುಂಡಿ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಎಂದಿನಂತೆ ಚಾಮುಂಡಿ ಬೆಟ್ಟಕ್ಕೆ ತೆರಳಲು ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಉಚಿತ ಸಾರಿಗೆ ಬಸ್ ಹತ್ತಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಮಾರ್ಗಮಧ್ಯೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಒಳಗಾಗಿದ್ದರು. ಇದೇ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ರವರು ತಮ್ಮ ಅಧಿಕೃತ ವಾಹನದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದಾಗ ಆತಂಕದಲ್ಲಿ ಸಿಲುಕಿದ್ದ ಪ್ರಯಾಣಿಕರ ಪರಿಸ್ಥಿತಿಗೆ ಸ್ಪಂದಿಸಿದ್ದಾರೆ.
ತಮ್ಮ ವಾಹನದಿಂದ ಇಳಿದು ಪ್ರಯಾಣಿಕರಿಗೆ ಧೈರ್ಯತುಂಬಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರಿಗೆ ಬೆಟ್ಟಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದಾರೆ. ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿದು ನಂತರ ಸುಸ್ಥಿತಿಗೆ ತಲುಪಿದ್ದನ್ನ ಖಚಿತಪಡಿಸಿಕೊಂಡು ಪ್ರಯಾಣಿಕರಿಗೆ ತೆರಳಲು ಅನುಕೂಲ ಮಾಡಿಕೊಟ್ಟಿದ್ದಾರೆ. ಡಿಸಿಪಿ ಬಿಂದುಮಣಿ ಅವರ ಸರಳತೆ ಹಾಗೂ ಸಮಯಪ್ರಜ್ಞೆ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಗಮನ ಹರಿಸಿದ ಪೊಲೀಸ್ ಅಧಿಕಾರಿಯ ಬದ್ಧತೆ ಸಾರ್ವಜನಿಕ ಕಳಕಳಿಗೆ ಒಂದು ಮಾದರಿಯಾಗಿದೆ.
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಸರಿಯಾದ ಸಮಯಕೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…