ಮೈಸೂರು ನಗರ

ಮುಡಾ ಕಚೇರಿ ಮುಂದೆ ಬಿಗಿ ಪೊಲೀಸ್ ಬಂದೋ ಬಸ್ತ್

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಕಾಂಗ್ರೆಸ್‌ ಪಕ್ಷ ಸಹ ಧರಣಿ ನಡೆಸುತ್ತಿದೆ. ಹೀಗಾಗಿ ಮುಡಾ ಕಚೇರಿಯ ಮುಂಭಾಗ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಮುಡಾ ಕಚೇರಿಯ ಸುತ್ತ ಬ್ಯಾರಿಕೇಡ್‌ ಅಳವಡಿಕೆ ಮಾಡಲಾಗಿದ್ದು, ಸುತ್ತಮುತ್ತಲಿನ ರಸ್ತೆಯನ್ನ ಕಂಪ್ಲೀಟ್‌ ಬಂದ್‌ ಮಾಡಲಾಗಿದೆ. ೧೦ KSRP ತುಕಡಿ ಸೇರಿ ೫೦೦ ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯಿಂದ ಮುಡಾ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದೆ. ಅಲ್ಲದೆ ಮಹಾರಾಜ ಕಾಲೇಜು ಮೈದಾನದಿಂದ ಮುಡಾ ಬಳಿ ಪ್ರತಿಭಟನೆಗೆ ಬಿಜೆಪಿ ತೆರಳಲಿದ್ದು, ಮೈದಾನದಲ್ಲೆ ಪ್ರತಿಭಟನಾಕಾರರನ್ನ ತಡೆಯಲು ಪೊಲೀಸರು ಸಹ ಪ್ಲಾನ್‌ ಮಾಡಿಕೊಂಡಿದ್ದಾರೆ.

ಇನ್ನು ಮತ್ತೊಂದು ಕಡೆ ಮುಡಾ ಕಚೇರಿ ಪಕ್ಕದಲ್ಲೆ ಧರಣಿಗೆ ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದ್ದು, ಬಿಜೆಪಿ ಪ್ರತಿಭಟನೆ ಖಂಡಿಸಿ ಸರ್ಕಾರದ ಪರ ಪ್ರತಿಭಟನೆ ನಡೆಸಲು ರೆಡಿಯಾಗುತ್ತಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

12 mins ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

57 mins ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

1 hour ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

2 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

5 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

5 hours ago