ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷ ಸಹ ಧರಣಿ ನಡೆಸುತ್ತಿದೆ. ಹೀಗಾಗಿ ಮುಡಾ ಕಚೇರಿಯ ಮುಂಭಾಗ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಮುಡಾ ಕಚೇರಿಯ ಸುತ್ತ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು, ಸುತ್ತಮುತ್ತಲಿನ ರಸ್ತೆಯನ್ನ ಕಂಪ್ಲೀಟ್ ಬಂದ್ ಮಾಡಲಾಗಿದೆ. ೧೦ KSRP ತುಕಡಿ ಸೇರಿ ೫೦೦ ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯಿಂದ ಮುಡಾ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದೆ. ಅಲ್ಲದೆ ಮಹಾರಾಜ ಕಾಲೇಜು ಮೈದಾನದಿಂದ ಮುಡಾ ಬಳಿ ಪ್ರತಿಭಟನೆಗೆ ಬಿಜೆಪಿ ತೆರಳಲಿದ್ದು, ಮೈದಾನದಲ್ಲೆ ಪ್ರತಿಭಟನಾಕಾರರನ್ನ ತಡೆಯಲು ಪೊಲೀಸರು ಸಹ ಪ್ಲಾನ್ ಮಾಡಿಕೊಂಡಿದ್ದಾರೆ.
ಇನ್ನು ಮತ್ತೊಂದು ಕಡೆ ಮುಡಾ ಕಚೇರಿ ಪಕ್ಕದಲ್ಲೆ ಧರಣಿಗೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದ್ದು, ಬಿಜೆಪಿ ಪ್ರತಿಭಟನೆ ಖಂಡಿಸಿ ಸರ್ಕಾರದ ಪರ ಪ್ರತಿಭಟನೆ ನಡೆಸಲು ರೆಡಿಯಾಗುತ್ತಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…