ಮೈಸೂರು ನಗರ

ಸಾರ್ವಜನಿಕರೊಂದಿಗೆ ಪೊಲೀಸರ ವರ್ತನೆ ಶಿಸ್ತು ಬದ್ಧವಾಗಿರಲಿ : ಎಡಿಜಿಪಿ ಅಲೋಕ್ ಕುಮಾರ್

ಮೈಸೂರು: ಸಾರ್ವಜನಿಕರೊಂದಿಗಿನ‌ ಪೊಲೀಸರ ವರ್ತನೆ ಶಿಸ್ತು ಬದ್ಧವಾಗಿರಬೇಕು ಎಂದು ರಾಜ್ಯ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆಶಿಸಿದರು.

ಮೈಸೂರಿನ ಜ್ಯೋತಿನಗರದಲ್ಲಿರುವ ಮಹಿಳಾ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ 9 ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಸೇವೆಗಾಗಿಯೇ ಪೊಲೀಸ್ ಇಲಾಖೆ ಇದೆ. ಆದಕಾರಣ, ಅವರೊಂದಿಗೆ ನಮ್ಮ ವರ್ತನೆ ಶಿಸ್ತುಬದ್ಧವಾಗಿರಬೇಕು. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಬರಬೇಕು. ಹೆಣ್ಣು ಮಕ್ಕಳಿಗೆ ಹೆಣ್ಣುಮಕ್ಕಳ ಬಗ್ಗೆ ಸ್ಪಂದನೆ ಇರಬೇಕು. ಸೇವಾ ಮನೋಭಾವ ಹೊಂದಬೇಕು. ಸ್ವಯಂ ಶಿಸ್ತು ಇರಬೇಕು ಎಂದು ಸೂಚ್ಯವಾಗಿ ತಿಳಿಸಿದರು.

ನಿಮ್ಮ ಕನಸು ಬೇರೆಯದೇ ಇದ್ದರೂ ಖಾಕಿ ಬಟ್ಟೆ ಹಾಕಿದ್ದೀರಿ, ಇದು ನಿಮ್ಮ ಸುಧೈವ. ನೀವು ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಒನಕೆ ಓಬವ್ವ, ಬೆಳವಾಡಿ ಮಲ್ಲಮ್ಮ ಆಗಬೇಕು. ಹೆಣ್ಣು ಮಕ್ಕಳು ಎನ್ನುವ ವಿಷಯವನ್ನು ನಿಮ್ಮ‌ ಮನಸ್ಸಿನಿಂದ ತೆಗೆದುಹಾಕಿ ಎಂದ ಅವರು ನಮ್ಮ‌ ಗುರಿ ನಿಮ್ಮನ್ನು ಸದೃಢಗೊಳಿಸುವುದಾಗಿದೆ ಎಂದರು.

ನೆರೆಯ ತೆಲಂಗಾಣ ಹಾಗೂ ಆಂದ್ರಪ್ರದೇಶ ರಾಜ್ಯದಲ್ಲಿ ಮಾಸಿಕ ಕೇವಲ 5 ಸಾವಿರ ತರಬೇತಿ ಭತ್ಯೆ ನೀಡಲಾಗುತ್ತಿದೆ. ನಮ್ಮ ಕರ್ನಾಟಕ ಸರ್ಕಾರ ನಿಮಗೆ 45000 ರೂಪಾಯಿ ನೀಡುತ್ತಿದೆ. ಅದಕ್ಕಾಗಿ ನೀವು ಈ ನೆಲಕ್ಕೆ ಬದ್ದರಾಗಿರಬೇಕು. ಬಂದ ಹಣವನ್ನು ದುರುಪಯೋಗ ಮಾಡದೆ, ಉಳಿತಾಯದೊಟ್ಟಿಗೆ ಚೆನ್ನಾಗಿ ಆಹಾರ ಸೇವನೆ ಮಾಡಿ ಆರೋಗ್ಯವನ್ನೂ ಕಾಪಾಡಿಕೊಳ್ಳಿ ಎಂದು ಸಲಹೆ ಮಾಡಿದರು.

ಪ್ರಶಿಕ್ಷಣಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಚಿಕನ್ ನೀಡಿ ಎಂದು ಶಾಲೆಯ ಪ್ರಾಂಶುಪಾಲೆ ಗೀತಾ ಅವರಿಗೆ ಸಲಹೆ ಮಾಡಿದ ಅಲೋಕ್ ಕುಮಾರ್, ಕ್ರೀಡಾಳುಗಳು ತಮ್ಮ ಚಟುವಟಿಕೆ ಮುಂದುವರೆಸಿ, ಭವಿಷ್ಯದ ದಿನಗಳಲ್ಲಿ ಅದರಿಂದ ಹೆಚ್ಚಿನ ನೆರವಾಗಲಿದೆ ಎಂದರು.

ಸೈಬರ್ ಕ್ರೈಮ್ ಪ್ರಮಾಣ ರಾಜ್ಯದಲ್ಲಿ ಶೇ.10 ಇದ್ದರೆ, ಬೆಂಗಳೂರಿನಲ್ಲಿ ಶೇ.30 ರಷ್ಟು ಪ್ರಮಾಣದಲ್ಲಿ ಸೈಬರ್ ಕ್ರೈಮ್ ಆಗುತ್ತಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ತರಬೇತಿ ಪಡೆಯಲು ಗಮನ ಕೊಡಿ. ಸರಗಳ್ಳತನ, ದರೋಡೆ ಇತ್ತೀಚಿಗೆ ಕಡಿಮೆ ಆಗುತ್ತಿದ್ದು, ಸೈಬರ್ ಅಪರಾಧದ ಹೆಚ್ಚಾಗುತ್ತಿರುವುದರಿಂದ ಅದರ ಬಗ್ಗೆ ತಿಳಿದುಕೊಳ್ಳಬೇಕು. ಅದರೊಂದಿಗೆ ವಿಧಿವಿಜ್ಞಾನ ವಿಷಯವೂ ಕೂಡ ಇಂದು ಆದ್ಯತೆಯ ವಿಷಯವಾಗಿದ್ದು, ಆ ಬಗ್ಗೆ ಕೂಡ ಅರಿವು ಅಗತ್ಯ. ಪುಸ್ತಕದ ವಿಷಯ ಮಾತ್ರವಲ್ಲದೆ, ಇಂಟರ್ಯಾಕ್ಟೀವ್ ತರಬೇತಿ ಇರಲಿ. ಬೋಧನಾ ಪ್ರಕ್ರಿಯೆ ಬದಲಾಗಬೇಕು, ಪೊಲೀಸ್ ಲೀಡರ್ ಶಿಪ್ ಬಗ್ಗೆ ಗಮನ ನೀಡಿ ಎಂದು ಸಲಹೆ ನೀಡಿದರು.

ಹೊರಾಂಗಣ ಮತ್ತು ಒಳಾಂಗಣದ ಬಗ್ಗೆ ಸಮನ್ವಯತೆ ಇರಬೇಕು. ಅನಿವಾರ್ಯ ಪರಿಸ್ಥಿತಿಯಲ್ಲಿ ಗುಂಪು ನಿಯಂತ್ರಣದ ಬಗ್ಗೆ ಅರಿವಿರಬೇಕು. ಪೊಲೀಸರಿಗೆ ಧೈರ್ಯ ಕೂಡ ಮುಖ್ಯ. ಆ ಸಲುವಾಗಿಯೇ ಮೊಟಾರ್ ಸೈಕಲ್ ಓಡಿಸುವ ತರಬೇತಿ ಕೊಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಪಿಸ್ತೂಲ್ ಫೈರಿಂಗ್ ಮೂಲಕ ತರಬೇತಿ ನೀಡಲಾಗುತ್ತಿದೆ. ಇದರಿಂದಾಗಿ ನಿಮ್ಮ ಸಾಮರ್ಥ್ಯ ಹೆಚ್ಚು ಮಾಡಿಕೊಳ್ಳಿ ಎಂದರು.

ವೇದಿಕೆಯಲ್ಲಿ ಮಹಿಳಾ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲರಾದ ಗೀತಾ, ಸೆಸ್ಕ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸವಿತಾ ಹೂಗಾರ್, ಡಿವೈಎಸ್ಪಿ ಶಂಕರೇಗೌಡ, ಇನ್ಸ್‌ಪೆಕ್ಟರ್
ಕಿರಣ್ ಕುಮಾರ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

28 mins ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

34 mins ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

38 mins ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

41 mins ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

51 mins ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

1 hour ago