Political change is certain in November: BJP State President B.Y. Vijayendra
ಮೈಸೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ. ಆದ್ದರಿಂದ ನವೆಂಬರ್ನಲ್ಲಿ ರಾಜಕೀಯ ಬದಲಾವಣೆ ಆಗೋದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್ನಲ್ಲಿ ಸಿಎಂ ಬದಲಾವಣೆ ಖಚಿತ. ಬಿಜೆಪಿ ವಿಪಕ್ಷವಾಗಿ ತನ್ನ ಕೆಲಸ ಮಾಡುತ್ತದೆ ಎಂದು ಭವಿಷ್ಯ ನುಡಿದರು.
ಇನ್ನು ನಾಳೆ ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸ್ಥಾನ ಅಲ್ಲಾಡುವ ವೇಳೆ ಈ ರೀತಿ ಸಮಾವೇಶ ಮಾಡಲಾಗುತ್ತದೆ. ಸಮಾವೇಶದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬೆದರಿಸುವ ತಂತ್ರ ಇದಾಗಿದೆ. ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಭೇಟಿಯಾಗಲು ಸಮಯವೇ ಸಿಕ್ಕಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಲು ರಾಹುಲ್ ಗಾಂಧಿ ಸಮಯ ಕೊಟ್ಟಿಲ್ಲ. ಹೀಗಾಗಿ ಸವಾಲು ಹಾಕಲು ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಇದು ಸಾಧನಾ ಸಮಾವೇಶ ಅಲ್ಲ., ಬ್ಲ್ಯಾಕ್ಮೇಲ್ ಸಮಾವೇಶ. ಹೈಕಮಾಂಡ್ಗೆ ಬ್ಲ್ಯಾಕ್ಮೇಲ್ ಮಾಡಲು ಮಾಡುತ್ತಿರುವ ಸಮಾವೇಶ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಏನು ಸಾಧನೆ ಮಾಡಿದ್ದಾರೆ ಎಂದು ಸಮಾವೇಶ ಮಾಡುತ್ತಿದ್ದಾರೆ. ಯಾವ ಸಮಾವೇಶಗಳೂ ಈ ಬಾರಿ ಕೆಲಸ ಮಾಡುವುದಿಲ್ಲ. ರಾಜ್ಯದಲ್ಲಿ ರಾಜಕೀಯವಾಗಿ ಬೆಳವಣಿಗೆಗಳು ಆಗುವುದು ಸತ್ಯ. ನವೆಂಬರ್ನಲ್ಲಿ ಸಿಎಂ ಬದಲಾವಣೆ ನಿಶ್ಚಿತ ಎಂದು ಭವಿಷ್ಯ ಹೇಳಿದರು.
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…