ಮೈಸೂರು ನಗರ

ನವೆಂಬರ್‌ನಲ್ಲಿ ರಾಜಕೀಯ ಬದಲಾವಣೆ ಆಗೋದು ನಿಶ್ಚಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ. ಆದ್ದರಿಂದ ನವೆಂಬರ್‌ನಲ್ಲಿ ರಾಜಕೀಯ ಬದಲಾವಣೆ ಆಗೋದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಬಿಜೆಪಿ ವಿಪಕ್ಷವಾಗಿ ತನ್ನ ಕೆಲಸ ಮಾಡುತ್ತದೆ ಎಂದು ಭವಿಷ್ಯ ನುಡಿದರು.

ಇನ್ನು ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಧನಾ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸ್ಥಾನ ಅಲ್ಲಾಡುವ ವೇಳೆ ಈ ರೀತಿ ಸಮಾವೇಶ ಮಾಡಲಾಗುತ್ತದೆ. ಸಮಾವೇಶದ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಬೆದರಿಸುವ ತಂತ್ರ ಇದಾಗಿದೆ. ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಭೇಟಿಯಾಗಲು ಸಮಯವೇ ಸಿಕ್ಕಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಲು ರಾಹುಲ್‌ ಗಾಂಧಿ ಸಮಯ ಕೊಟ್ಟಿಲ್ಲ. ಹೀಗಾಗಿ ಸವಾಲು ಹಾಕಲು ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಇದು ಸಾಧನಾ ಸಮಾವೇಶ ಅಲ್ಲ., ಬ್ಲ್ಯಾಕ್‌ಮೇಲ್‌ ಸಮಾವೇಶ. ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಲು ಮಾಡುತ್ತಿರುವ ಸಮಾವೇಶ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಏನು ಸಾಧನೆ ಮಾಡಿದ್ದಾರೆ ಎಂದು ಸಮಾವೇಶ ಮಾಡುತ್ತಿದ್ದಾರೆ. ಯಾವ ಸಮಾವೇಶಗಳೂ ಈ ಬಾರಿ ಕೆಲಸ ಮಾಡುವುದಿಲ್ಲ. ರಾಜ್ಯದಲ್ಲಿ ರಾಜಕೀಯವಾಗಿ ಬೆಳವಣಿಗೆಗಳು ಆಗುವುದು ಸತ್ಯ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ನಿಶ್ಚಿತ ಎಂದು ಭವಿಷ್ಯ ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

4 mins ago

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

34 mins ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

36 mins ago

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

45 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

53 mins ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

59 mins ago