Political change is certain in November: BJP State President B.Y. Vijayendra
ಮೈಸೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಚಿತ. ಆದ್ದರಿಂದ ನವೆಂಬರ್ನಲ್ಲಿ ರಾಜಕೀಯ ಬದಲಾವಣೆ ಆಗೋದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್ನಲ್ಲಿ ಸಿಎಂ ಬದಲಾವಣೆ ಖಚಿತ. ಬಿಜೆಪಿ ವಿಪಕ್ಷವಾಗಿ ತನ್ನ ಕೆಲಸ ಮಾಡುತ್ತದೆ ಎಂದು ಭವಿಷ್ಯ ನುಡಿದರು.
ಇನ್ನು ನಾಳೆ ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸ್ಥಾನ ಅಲ್ಲಾಡುವ ವೇಳೆ ಈ ರೀತಿ ಸಮಾವೇಶ ಮಾಡಲಾಗುತ್ತದೆ. ಸಮಾವೇಶದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಬೆದರಿಸುವ ತಂತ್ರ ಇದಾಗಿದೆ. ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಭೇಟಿಯಾಗಲು ಸಮಯವೇ ಸಿಕ್ಕಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಲು ರಾಹುಲ್ ಗಾಂಧಿ ಸಮಯ ಕೊಟ್ಟಿಲ್ಲ. ಹೀಗಾಗಿ ಸವಾಲು ಹಾಕಲು ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಇದು ಸಾಧನಾ ಸಮಾವೇಶ ಅಲ್ಲ., ಬ್ಲ್ಯಾಕ್ಮೇಲ್ ಸಮಾವೇಶ. ಹೈಕಮಾಂಡ್ಗೆ ಬ್ಲ್ಯಾಕ್ಮೇಲ್ ಮಾಡಲು ಮಾಡುತ್ತಿರುವ ಸಮಾವೇಶ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಏನು ಸಾಧನೆ ಮಾಡಿದ್ದಾರೆ ಎಂದು ಸಮಾವೇಶ ಮಾಡುತ್ತಿದ್ದಾರೆ. ಯಾವ ಸಮಾವೇಶಗಳೂ ಈ ಬಾರಿ ಕೆಲಸ ಮಾಡುವುದಿಲ್ಲ. ರಾಜ್ಯದಲ್ಲಿ ರಾಜಕೀಯವಾಗಿ ಬೆಳವಣಿಗೆಗಳು ಆಗುವುದು ಸತ್ಯ. ನವೆಂಬರ್ನಲ್ಲಿ ಸಿಎಂ ಬದಲಾವಣೆ ನಿಶ್ಚಿತ ಎಂದು ಭವಿಷ್ಯ ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…