ಮೈಸೂರು ನಗರ

ರಾಜಕಾರಣದಲ್ಲಿ ಯಾವಾಗ ಬೇಕಾದ್ರೂ ಕ್ರಾಂತಿ ಆಗಬಹುದು: ಶಾಸಕ ತನ್ವೀರ್‌ ಸೇಠ್‌

ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು ಎಂದು ಶಾಸಕ ತನ್ವೀರ್‌ ಸೇಠ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸೆಪ್ಟಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು. ಸಿಎಂ ಬದಲಾವಣೆ ವೇಳೆ ವಿಚಾರ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಐದು ವರ್ಷ ಸುಭದ್ರ ಸರ್ಕಾರ ಕೊಡಬೇಕಾದದ್ದು ನಮ್ಮ‌ ಜವಾಬ್ದಾರಿ. ಪಕ್ಷದಿಂದ ಸರ್ಕಾರ ಬಂದಿದೆ. ಸರ್ಕಾರದಿಂದ ಪಕ್ಷ ಬಂದಿಲ್ಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನಾನು ನೂರು ವರ್ಷ ಬದುಕಬೇಕು ಅಂದುಕೊಂಡ್ರೂ, ನನ್ನಿಂದ ಸಾಧ್ಯನಾ ಎಂದು ನೋಡಬೇಕು. ಮಾರನೇ ದಿನ ಬೆಳಿಗ್ಗೆ ನನಗೆ ಆಗುತ್ತೋ ಇಲ್ವೋ‌ ಗೊತ್ತಿಲ್ಲ. ಸಿದ್ದರಾಮಯ್ಯ ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಇರುತ್ತಾರೊ ಅಲ್ಲಿಯವರೆಗೆ ಅವರೇ ನಮ್ಮ ಮುಖ್ಯಮಂತ್ರಿಗಳು. ಬದಲಾವಣೆ ಇಲ್ಲ ಅಂತ ಎಲ್ಲೂ ಇಲ್ಲ. ಅದು ಐದು ವರ್ಷಗಳ ಕಾಲ ಇರಬಹುದು. ಅಧಿಕಾರ ಬದಲಾವಣೆ ಸೂತ್ರ ನಮಗೆ ಗೊತ್ತಿಲ್ಲ. ವರಿಷ್ಟರ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದರು.

ಇನ್ನು ಡಿ.ಕೆ.ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಶಾಸಕರ ಬೆಂಬಲ ಪಕ್ಷಕ್ಕೆ ಇದೆ. ಯಾರೋ ಮಾತಾಡಿದಕ್ಕೆ ಪ್ರತಿಕ್ರಿಯೆ ಕೊಡುತ್ತಾ ಹೋದರೆ, ಅದಕ್ಕೆ ಕೊನೆ ಇಲ್ಲ. ಯಾರು ಯಾವ ಸನ್ನಿವೇಶದಲ್ಲಿ ಮಾತಾಡಿದ್ದಾರೆ ನನಗೆ ಗೊತ್ತಿಲ್ಲ ಎಂದರು.

ಇನ್ನು ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಕೇಳಿಕೊಳ್ಳುತ್ತೇನೆ. ನಾವು ಬೇರೇ ಇನ್ನೇನು ಹೇಳಲ್ಲ. ಏನು ಬೇಕಾದರೂ ಆಗಬಹುದು. ಸಂಪುಟ ಪುನರ್ ರಚನೆ ಯಾವಾಗ ಬೇಕಾದರೂ ಆಗಬಹುದು. ಆಗೋವರೆಗೂ ಪಕ್ಷದ ಮೇಲೆ ನಂಬಿಕೆ ಇಟ್ಟು ಕಾಯುತ್ತೇನೆ. ನನಗೆ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆ ಇಟ್ಟುಕೊಂಡಿದ್ದೇನೆ. ನಾನು ಕೂಡ ಸನ್ಯಾಸಿ ಅಲ್ಲ. ನಿರೀಕ್ಷೆ ಎಲ್ಲರಿಗೂ ಇದೆ. ಅವಕಾಶ ಸಿಕ್ಕಿಲ್ಲ, ಸಿಕ್ಕಾಗ ಕೆಲಸ ಮಾಡುತ್ತೇನೆ. ಆದಾಗ ಆಗುತ್ತದೆ ಎಂದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago