ಮೈಸೂರು: ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ನೀಡುವ ಹೇಳಿಕೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಗೃಹ ಸಚಿವರಿಗೆ ಪೊಲಿಟಿಕಲ್ ವೈರಾಗ್ಯ ಬಂದ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದೇವಪ್ಪ ಹೇಳುತ್ತಾರೆ ಸಿಎಂ ರೆಕಾರ್ಡ್ ಮಾಡಬೇಕು ಅಂತಾರೆ. ಮಹದೇವಪ್ಪ ಅವರೇ, ಎಷ್ಟು ವರ್ಷ ಆಡಳಿತ ನಡೆಸಿದ್ದೀರಿ ಅನ್ನೋದಲ್ಲ. ಈ ನಾಡಿನ ಜನರ ಎಷ್ಟು ಸಮಸ್ಯೆ ಬಗೆಹರಿಸಿದ್ದೀರಿ ಅನ್ನೋದು ಮುಖ್ಯ. ನಮಗೆ 20 ತಿಂಗಳ, 14 ತಿಂಗಳ ಆಡಳಿತ ತೃಪ್ತಿಯಿದೆ. ಗ್ಯಾರಂಟಿ ಯೋಜನೆ ಯಾರಪ್ಪನ ದುಡ್ಡು. ಮೆಟ್ರೋ ದರ ಏರಿಸಿ ಹಣ ಕೊಡೋಕೆ ನೀವೇ ಆಗಬೇಕಾ? ಈ ರೀತಿ ದರ ಏರಿಸಿದರೆ ನಾನು 10 ಸಾವಿರ ರೂ ಕೊಡುತ್ತೇನೆ ಎಂದು ಟಾಂಗ್ ಕೊಟ್ಟರು.
ಇನ್ನು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂಟೆಗಟ್ಟಲೇ ಕಲ್ಲು ತೆಗೆದುಕೊಂಡು ಬಂದು ಹೊಡೆದವರನ್ನು ರಕ್ಷಣೆ ಮಾಡಬೇಕಾ ಎಂದು ಪ್ರಶ್ನೆ ಮಾಡಿದರು.
ಇನ್ನು ಯಾರನ್ನೋ ಓಲೈಸಲು ಸರ್ಕಾರ ಇಲ್ಲ. ಕಾನೂನು ಬಾಹಿರ ಚಟುವಟಿಕೆ ನಡೆಸುವವನು ಯಾರೇ ಆಗಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇದು ರಾಜ್ಯ ಸರ್ಕಾರದ ಕರ್ತವ್ಯ ಎಂದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…