ಮೈಸೂರು ನಗರ

ಸಿಎಂಗೆ ರೈತ ಹಿತಕ್ಕಿಂತಲೂ ರಾಜಕೀಯವೇ ಮುಖ್ಯವಾಗಿದೆ : ಯದುವೀರ್‌ ಆರೋಪ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು ರಾಜ್ಯ ಸರ್ಕಾರದ ಜವಾಬ್ದಾರಿ. ನೀತಿ ಆಯೋಗದ ಸಭೆಗೆ ರೇವಂತ್ ರೆಡ್ಡಿ, ಸ್ಟಾಲಿನ್ ಸೇರಿದಂತೆ ಪಕ್ಕದ ರಾಜ್ಯಗಳ ಮುಖ್ಯಮಂತ್ರಿಗಳೆಲ್ಲ ಹೋಗುತ್ತಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಮಾತ್ರ ಗೈರಾಗುತ್ತಾರೆ ಎಂದರು.

ಇದನ್ನು ಓದಿ : ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ : ಕೇಂದ್ರ ಸ್ಪಂದನೆ

ಮೈಸೂರಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಯಿಂದಾಗಿ ಅಪಾರ ಪ್ರಮಾಣದ ಸಾವು ನೋವುಗಳಾದವು. ಆದರೆ ಯಾವುದಕ್ಕೂ ರಾಜ್ಯಸರ್ಕಾರ ಸ್ಪಂದಿಸಲಿಲ್ಲ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೨೯೩ ಕಿ.ಮೀ. ನಾಗರಹೊಳೆ ಅಭಯಾರಣ್ಯದ ಗಡಿ ಇದೆ. ಈ ಪೈಕಿ ಕುಟ್ಟ, ಹುಣಸೂರು ಭಾಗದಲ್ಲಿ ರೈಲ್ವೆ ಬ್ಯಾರಿಕೇಡ್, ಕಂದಕ ನಿರ್ಮಾಣ ಮಾಡಲಾಗಿದೆ. ರೈಲ್ವೆ ಬ್ಯಾರಿಕೇಡ್‌ಗೆ ಮೂರು ಕಂಬಿಗಳನ್ನು ಅಳವಡಿಸುವಂತೆ ರೈತರು ಕೇಳುತ್ತಿದ್ದಾರೆ. ಮನವಿಯನ್ನು ಪರಿಗಣಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

1 hour ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago