ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು ರಾಜ್ಯ ಸರ್ಕಾರದ ಜವಾಬ್ದಾರಿ. ನೀತಿ ಆಯೋಗದ ಸಭೆಗೆ ರೇವಂತ್ ರೆಡ್ಡಿ, ಸ್ಟಾಲಿನ್ ಸೇರಿದಂತೆ ಪಕ್ಕದ ರಾಜ್ಯಗಳ ಮುಖ್ಯಮಂತ್ರಿಗಳೆಲ್ಲ ಹೋಗುತ್ತಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಮಾತ್ರ ಗೈರಾಗುತ್ತಾರೆ ಎಂದರು.
ಇದನ್ನು ಓದಿ : ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ : ಕೇಂದ್ರ ಸ್ಪಂದನೆ
ಮೈಸೂರಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಯಿಂದಾಗಿ ಅಪಾರ ಪ್ರಮಾಣದ ಸಾವು ನೋವುಗಳಾದವು. ಆದರೆ ಯಾವುದಕ್ಕೂ ರಾಜ್ಯಸರ್ಕಾರ ಸ್ಪಂದಿಸಲಿಲ್ಲ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೨೯೩ ಕಿ.ಮೀ. ನಾಗರಹೊಳೆ ಅಭಯಾರಣ್ಯದ ಗಡಿ ಇದೆ. ಈ ಪೈಕಿ ಕುಟ್ಟ, ಹುಣಸೂರು ಭಾಗದಲ್ಲಿ ರೈಲ್ವೆ ಬ್ಯಾರಿಕೇಡ್, ಕಂದಕ ನಿರ್ಮಾಣ ಮಾಡಲಾಗಿದೆ. ರೈಲ್ವೆ ಬ್ಯಾರಿಕೇಡ್ಗೆ ಮೂರು ಕಂಬಿಗಳನ್ನು ಅಳವಡಿಸುವಂತೆ ರೈತರು ಕೇಳುತ್ತಿದ್ದಾರೆ. ಮನವಿಯನ್ನು ಪರಿಗಣಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…