nadaprabhu kempegowda
ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿ ಅವರು, ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಜನರು ಈಗ ಜಾತಿ, ಮತ, ಪಂಥ, ಧರ್ಮದ ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ. ಕೆಂಪೇಗೌಡರ ಜಯಂತಿಯು ಪಕ್ಷಾತೀತ ಹಾಗೂ ಜಾತ್ಯಾತೀತ ಕಾರ್ಯಕ್ರಮವಾಗಿದೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಹನೀಯರ ಆದರ್ಶಗಳನ್ನು ಯುವಜನರಿಗೆ ತಿಳಿಸಿಕೊಡಲು ಅವರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ ದೇವೇಗೌಡ, ಹರೀಶ್ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…
ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳು ಸರಿಯಾದ ಸಮಯಕೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…