nadaprabhu kempegowda
ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ನಾಥ ಸ್ವಾಮೀಜಿ ಅವರು, ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಜನರು ಈಗ ಜಾತಿ, ಮತ, ಪಂಥ, ಧರ್ಮದ ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ. ಕೆಂಪೇಗೌಡರ ಜಯಂತಿಯು ಪಕ್ಷಾತೀತ ಹಾಗೂ ಜಾತ್ಯಾತೀತ ಕಾರ್ಯಕ್ರಮವಾಗಿದೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಹನೀಯರ ಆದರ್ಶಗಳನ್ನು ಯುವಜನರಿಗೆ ತಿಳಿಸಿಕೊಡಲು ಅವರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ ದೇವೇಗೌಡ, ಹರೀಶ್ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…