ಮೈಸೂರು: ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚಿಕೆ ವಿಚಾರದಲ್ಲಿ ನಮ್ಮ ಹೈಕಮಾಂಡ್ ಮೊದಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು. ಈ ವಿಚಾರದಲ್ಲಿ ಒಪ್ಪಂದ ಆಗಿದೆಯೋ? ಇಲ್ಲವೋ ನನಗೆ ಗೊತ್ತಿಲ್ಲ. ಈ ಗೊಂದಲ ಮಾತ್ರ ಎರಡೂವರೆ ವರ್ಷದಿಂದ ಮುಂದುವರಿದಿದೆ. ಅದು ಅಪಾಯಕಾರಿ ಹಂತ ತಲುಪುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಆದಷ್ಟು ಬೇಗ ಹೈಕಮಾಂಡ್ ತನ್ನ ನಿರ್ಧಾರ ಹೇಳಲಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಪಕ್ಷಕ್ಕೇನು ನಷ್ಟ ಇಲ್ಲ ಎಂದು ಹೇಳಿದರು.
ಇನ್ನು ಹೈಕಮಾಂಡ್ ನಾಯಕರ ಬಳಿ ಮಾತುಕತೆ ನಡೆದ ಸಂದರ್ಭದಲ್ಲಿ ಯಾರು ಇರಲಿಲ್ಲ. ಯಾರು ಮಾತು ಕೊಟ್ಟಿದ್ದಾರೆ? ಯಾರು ಮಾತು ಕೊಟ್ಟಿಲ್ಲ? ಯಾರು ಮಾತು ತಪ್ಪಿದ್ದಾರೆಂದು ಮಾತುಕತೆ ವೇಳೆ ಇದ್ದವರಿಗೆ ಗೊತ್ತು. ಕಾಂಗ್ರೆಸ್ ಶಾಸಕರ ಮುಂದೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…