ಮೈಸೂರು ನಗರ

ಯಾವುದೇ ಕಾರಣಕ್ಕೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಮಹಾರಾಜರು ಗ್ರಾಮಸ್ಥರಿಗೆ ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಭೂಮಿ ವಿಚಾರ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಜಿಲ್ಲಾಧಿಕಾರಿಗೆ ಕಳೆದ 2014ರಲ್ಲೇ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ಇಲ್ಲದೆ ಇರಬಹುದು. 1951ರಲ್ಲಿ ಸರ್ಕಾರದ ಕಾರ್ಯದರ್ಶಿ ಆಗಿದ್ದ ಶ್ರೀನಿವಾಸನ್ ಅವರ ಸಹಿ ಇರುವ ಪತ್ರದಲ್ಲಿ ನಮ್ಮ ಆಸ್ತಿ ಪಟ್ಟಿಯಲ್ಲಿ 4,500 ಎಕರೆಯೂ ಇದೆ ಎಂದರು.

ಇನ್ನು ಅರಮನೆ ಹೆಸರಿಗೆ ಜಮೀನು ಬಂದರು ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಅರಮನೆ ಹೆಸರಿಗೆ ಬಂದರು ಗ್ರಾಮಸ್ಥರು ಹಾಗೂ ನಾವು ಕುಳಿತು ಅದನ್ನು ಅವರಿಗೆ ಬಿಟ್ಟು ಕೊಡುವ ವ್ಯವಸ್ಥೆ ಮಾಡುತ್ತೇವೆ. ಆ ಗ್ರಾಮಕ್ಕೆ ಮಹಾರಾಜರು ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಅವರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ. ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನು ಅರಮನೆ ಕಚೇರಿಗೆ ತಲುಪಿಸಲಿ. ಗ್ರಾಮಸ್ಥರು ಯಾವುದೇ ಸಂದರ್ಭದಲ್ಲಾದರೂ ಅರಮನೆ ಕಚೇರಿಗೆ ಗಿಫ್ಟ್ ಕೊಟ್ಟಿರುವ ದಾಖಲೆ ಇದ್ದರೆ ಕೊಡಿ. ಒಂದು ವೇಳೆ ಗ್ರಾಮಸ್ಥರ ಬಳಿ ಗಿಫ್ಟ್ ಕೊಟ್ಟ ದಾಖಲೆ ಇಲ್ಲದಿದ್ದರೂ ಅವರ್ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಭರವಸೆ ನೀಡಿದರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

58 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

2 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

2 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

3 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

3 hours ago