ಮೈಸೂರು ನಗರ

ಯಾವುದೇ ಕಾರಣಕ್ಕೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಮಹಾರಾಜರು ಗ್ರಾಮಸ್ಥರಿಗೆ ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಭೂಮಿ ವಿಚಾರ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಜಿಲ್ಲಾಧಿಕಾರಿಗೆ ಕಳೆದ 2014ರಲ್ಲೇ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ಇಲ್ಲದೆ ಇರಬಹುದು. 1951ರಲ್ಲಿ ಸರ್ಕಾರದ ಕಾರ್ಯದರ್ಶಿ ಆಗಿದ್ದ ಶ್ರೀನಿವಾಸನ್ ಅವರ ಸಹಿ ಇರುವ ಪತ್ರದಲ್ಲಿ ನಮ್ಮ ಆಸ್ತಿ ಪಟ್ಟಿಯಲ್ಲಿ 4,500 ಎಕರೆಯೂ ಇದೆ ಎಂದರು.

ಇನ್ನು ಅರಮನೆ ಹೆಸರಿಗೆ ಜಮೀನು ಬಂದರು ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲ. ಅರಮನೆ ಹೆಸರಿಗೆ ಬಂದರು ಗ್ರಾಮಸ್ಥರು ಹಾಗೂ ನಾವು ಕುಳಿತು ಅದನ್ನು ಅವರಿಗೆ ಬಿಟ್ಟು ಕೊಡುವ ವ್ಯವಸ್ಥೆ ಮಾಡುತ್ತೇವೆ. ಆ ಗ್ರಾಮಕ್ಕೆ ಮಹಾರಾಜರು ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಅವರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ. ಗ್ರಾಮಸ್ಥರು ತಮ್ಮ ಬಳಿ ಇರುವ ಗಿಫ್ಟ್ ದಾಖಲೆಯನ್ನು ಅರಮನೆ ಕಚೇರಿಗೆ ತಲುಪಿಸಲಿ. ಗ್ರಾಮಸ್ಥರು ಯಾವುದೇ ಸಂದರ್ಭದಲ್ಲಾದರೂ ಅರಮನೆ ಕಚೇರಿಗೆ ಗಿಫ್ಟ್ ಕೊಟ್ಟಿರುವ ದಾಖಲೆ ಇದ್ದರೆ ಕೊಡಿ. ಒಂದು ವೇಳೆ ಗ್ರಾಮಸ್ಥರ ಬಳಿ ಗಿಫ್ಟ್ ಕೊಟ್ಟ ದಾಖಲೆ ಇಲ್ಲದಿದ್ದರೂ ಅವರ್ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಭರವಸೆ ನೀಡಿದರು

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

11 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

11 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago